Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ
ತಾಜಾ ಸುದ್ದಿ

Davanagere | ಆತ್ಮಸಾಕ್ಷಿಗನುಗುಣವಾಗಿ ಕರ್ತವ್ಯ ನಿರ್ವಹಿಸಿ : ಡಿಸಿ

Dinamaana Kannada News
Last updated: November 12, 2024 12:51 pm
Dinamaana Kannada News
Share
davanagere
davanagere
SHARE

ದಾವಣಗೆರೆ ನ.12 (Davanagere) : ಸಾರ್ವಜನಿಕರ ಕೆಲಸವನ್ನು ಮಚ್ಚಿಸುವುದಕ್ಕಾಗಿ  ಮಾಡದೆ, ಆತ್ಮ ಸಾಕ್ಷಿಗನುಗುಣವಾಗಿ ಮಾಡಿದಾಗ ಉತ್ತಮ ಕೆಲಸವಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಹೇಳಿದರು.

ಸಾಂಖ್ಯಿಕ ಇಲಾಖೆ, ಹಾಗೂ ಅಪರ ಜಿಲ್ಲಾ ಜನನ, ಮರಣ ನೋಂದಾಣಾಧಿಕಾರಿಗಳ ಕಚೇರಿ, ದಾವಣಗೆರೆ ಆಶ್ರಯದಲ್ಲಿ ಜಿಲ್ಲಾಡಳಿತದ ತುಂಗಾಭದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನನ ಮರಣ ನೋಂದಣಿ ನಿಯಮಯಗಳು ಮತ್ತು ಇ -ಜನ್ಮ ತಂತ್ರಾಂಶದ ನಿರ್ವಹಣೆ ಕರಿತ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನನ, ಮರಣ ದಾಖಲೆಗಳನ್ನು ಪಡೆಯಲು ಬರುವ ಜನರನ್ನು ಅಲೆದಾಡಿಸದೆ ನಿಗಧಿತ ಸಮಯದೊಳಗೆ ಜನನ, ಮರಣ ಪ್ರಮಾಣ ಪತ್ರವನ್ನು ವಿತರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿದರು.

ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಘಟನೆಗಳು ಘಟಿಸಿದ 30 ದಿನಗಳ ಒಳಗಿನ ಘಟನೆಗಳನ್ನು ನೋಂದಾಯಿಸಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಕುಟುಂಬದಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳ ಮಾಹಿತಿಯನ್ನು ಜಿಲ್ಲಾ ಹಾಗೂ ಗ್ರಾಮೀಣ ಜನನ, ಮರಣ ಉಪನೋಂದಣಾಧಿಕಾರಿಗಳು ಹಾಗೂ ನೋಂದಣಾಧಿಕಾರಿಗಳಿಗೆ ನೀಡಿ ಕಡ್ಡಾಯವಾಗಿ ಇ-ಜನ್ಮ ತಂತ್ರಾಶದಲ್ಲಿ ಜನನ, ಮರಣ ಪ್ರಮಾಣ ಪತ್ರಗಳನ್ನು ಪಡೆಯುವಂತೆ ತಿಳಿಸಿದರು.

ಜನನ,ಮರಣ ಘಟನೆ ನಡೆದ 1 ರಿಂದ 21 ದಿನಗಳೊಳಗೆ ಪ್ರಮಾಣ ಪತ್ರ ಲಭ್ಯವಿದ್ದು, ಘಟನೆ ಮನೆಯಲ್ಲಾಗಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತಿಯಲ್ಲಿ ಕಾರ್ಯದರ್ಶಿಗಳು , ನಗರ ಪ್ರದೇಶವಾಗಿದ್ದರೆ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕರು. ಮತ್ತು ಸರ್ಕಾರಿ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರದಲ್ಲಾಗಿದ್ದರೆ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳ ನಿವಾಸಿ ವೈದ್ಯಾಧಿಕಾರಿಗಳ ಹತ್ತಿರ ಪಡೆಯಬಹುದಾಗಿದೆಂದು ತಿಳಿಸಿದರು.

ಘಟನೆ ನಡೆದ 21 ರಿಂದ 30 ದಿನಗಳೊಳಗೆ ಘಟನೆಯು ಖಾಸಗಿ ಆಸ್ಪತ್ರೆಯಲ್ಲಿ ಆಗಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆಯಬೇಕು, ಗ್ರಾಮದಲ್ಲಿ ಆಗಿದ್ದರೆ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು. ನಗರ ಪ್ರದೇಶವಾಗಿದ್ದಲ್ಲಿ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಹಾಗೂ ಆರೋಗ್ಯ ನಿರೀಕ್ಷಕರಲ್ಲಿ ಪಡೆಬಹುದಾಗಿದೆ. ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ್ ಮಾ.ಕರೆಣ್ಣವರ್ ಮಾತನಾಡಿ ಜನನ, ಮರಣಗಳ ಅಂಕಿ ಅಂಶಗಳ ಮೂಲಕ ನೋಂದಣಿ ಆದರೆ ಕೊನೆಯ ಒಂದು ವರ್ಷದಲ್ಲಿ ಎಷ್ಟು ಜನ ಮರಣ ಆಗಿದೆ, ಎಷ್ಟು ಜನನ ಆಗಿದೆ ಎಂಬ ಅಂಕಿಅಂಶವನ್ನು ಪರಿಶೀಲಿಸಿದಾಗ ಇದರ ನಿಖರ ಮಾಹಿತಿ ದೊರೆಯುತ್ತದೆ. ಹಾಗೆಯೇ ಮುಂದಿನ ದಿನಗಳಲ್ಲಿ  ಜನನ, ಮರಣ ಪ್ರಮಾಣ ಪತ್ರ ವಿತರಿಸಲು ವಿವಿಧ  ಇಲಾಖೆಗಳನ್ನು ಸೇರ್ಪಡೆ ಮಾಡುವ ಗುರಿ ಇದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆಯವರು ನಮ್ಮಲ್ಲಿ ಬಂದು ಎಷ್ಟು ಜನ ಯುವಜನ, ವಯಸ್ಕರು ಮತ್ತು ಗೃಹಣಿಯರ ಅಂಕಿ ಅಂಶಗಳನ್ನು ಸರಿಯಾದ ನೊಂದಣಿ ಪದ್ದತಿಯಿಂದ ಸಾಧ್ಯವಾಗಲಿದೆ ಎಂದರು.

ಜನಸಂಖ್ಯೆಗನುಗುಣವಾಗಿ ಸರ್ಕಾರದಿಂದ ಅನುದಾನ ಪಡೆಯಬೇಕಾದರೆ ನೊಂಣಿಯ ಅಂಕಿ ಅಂಶಗಳು ಸಹಕಾರಿಯಾಗಲಿದೆ ತಿಳಿಸಿದರು.

ಜನನ ಮರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜನರನ್ನು ಅಲೆದಾಡಿಸದೆ, ಸೂಕ್ತ ಸಮಯದೊಳಗೆ ಜನನ ಮರಣ ಪ್ರಮಾಣ ಪತ್ರವನ್ನು ನೀಡಿದರೆ ಸಾರ್ವಜನಿಕರು ನ್ಯಾಯಾಲಯಕ್ಕೆ ಬರುವ ಸಂಖ್ಯೆ ಕಡಿಮೆಯಾಗುತ್ತದೆ. ಸಕಾಲದಲ್ಲಿ ದಾಖಲೆ ನೀಡುವುದರಿಂದ ಜನರ ಸಮಯ, ಆರ್ಥಿಕ ಸ್ಥಿತಿ ಹಾಗೂ  ಜನರ ವೈಯಕ್ತಿಕ ಜೀವನಕ್ಕೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ , ಬೆಂಗಳೂರು ಜನನ ಮರಣ ವಿಭಾಗದ ಜಂಟಿ ನಿರ್ದೇಶಕರಾದ ಎಸ್.ಕೆ.ಚಿಕ್ಕಬೀರಯ್ಯ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನೀಲಾ .ಕೆ  ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read also : Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
Next Article DAVANAGERE Davanagere | ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ | ಸುರೇಶ್ ಬಿ ಇಟ್ನಾಳ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ, ಜು.18:  ಚಿತ್ರದುರ್ಗ ನಗರದಲ್ಲಿ ಜು.20ರಂದು 1.30ಕ್ಕೆ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

By Dinamaana Kannada News

Davanagere | ಪಾಲಿಕೆ ವಲಯ ಕಚೇರಿ-2 ಎಸ್‍ಡಿಎ ರೂಪಾ.ಹೆಚ್ ಅಮಾನತು

ದಾವಣಗೆರೆ (Davanagere): ದಾವಣಗೆರೆ ಮಹಾನಗರಪಾಲಿಕೆ ವಲಯ ಕಚೇರಿ-2ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ.ಹೆಚ್ ಇವರನ್ನು ನಗದು ವಹಿಯಲ್ಲಿ…

By Dinamaana Kannada News

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.14  :  ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?