Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಮಾಡಿದಂತೆ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಮಾಡಿದಂತೆ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: April 26, 2025 1:30 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ನೀವು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ದಾದಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಎಸಗುವ ದ್ರೋಹ ಹಾಗೂ ಅಪಮಾನ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷರೂ ಆದ ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಹೇಳಿದರು.

ಮಾಯಕೊಂಡ ಪಟ್ಟಣದ ಎ. ಕೆ. ಕಾಲೋನಿಯಲ್ಲಿ ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂರವರ ಜಯಂತ್ಯೋತ್ಸವ ಹಾಗೂ ಡಿಎಸ್ ಎಸ್ ಗ್ರಾಮ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಡಾ. ಬಿ. ಆರ್. ಅಂಬೇಡ್ಕರ್ ಅವರು ಉತ್ತಮ ಶಿಕ್ಷಣ ಪಡೆದರೆ ಎಲ್ಲವನ್ನೂ ಸಾಧಿಸಬಹುದು ಎಂದು ಹೇಳಿದ್ದರು. ಅವರ ಬಳಿ ಲೆಕ್ಕವಿಲ್ಲದಷ್ಟು ಪುಸ್ತಕ ಇತ್ತು. ಜ್ಞಾನ ಸಂಪಾದನೆಯಿಂದ ಅಂಬೇಡ್ಕರ್ ಅವರು ವಿಶ್ವವೇ ತಿರುಗಿ ನೋಡುವಂತ ಸಾಧನೆ ಮಾಡಿದರು ಎಂದು ಬಣ್ಣಿಸಿದರು.

ಅಂಬೇಡ್ಕರ್ ಜಯಂತಿ ಮಾಡುವ ಉದ್ದೇಶ ಕೇವಲ ಭಾಷಣ ಮಾಡುವುದಲ್ಲ. ಕನಿಷ್ಠ ಎಂದರೂ ಪದವಿ ಪಡೆದು ದಾವಣಗೆರೆ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಿರಿ. ನಿಮ್ಮ ಮಕ್ಕಳು ಐಎಎಸ್, ಕೆಎಎಸ್ ಮಾಡುತ್ತಾರೆ ಎಂದರೆ ನಮ್ಮ ಬಳಿಗೆ ಕಳುಹಿಸಿ. ನಮ್ಮ ಕೈಯಲ್ಲಾದಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದರು.

ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸ ಬೆಳೆಸಿ. ಕನಿಷ್ಠ ಎಂದರೂ 20ರಿಂದ 30 ಪುಸ್ತಕಗಳನ್ನು ಕೊಡಿ. ಓದಲು ಹೇಳಿ. ಮನೆ, ವಾಹನ, ಹೊಲ, ಕೆಲಸ ಇಲ್ಲವೆಂದರೂ ಪರವಾಗಿಲ್ಲ ದೊಡ್ಡ ಕನಸು ಕಾಣಬೇಕು. ಮುಂದೊಂದು ದಿನ ಎಂಪಿ, ಶಾಸಕ, ಸಚಿವರಾಗುತ್ತೆಂಬ ಕನಸು ಕಂಡರೆ ಜೀವನದಲ್ಲಿ ಏನನ್ನಾದರೂ ಸಾಧಿಸಿಯೇ ಸಾಧಿಸುತ್ತೀರಿ. ಶಿಕ್ಷಣ ಮತ್ತು ಜ್ಞಾನದಿಂದ ಮಾತ್ರ ಜೀವನದಲ್ಲಿ ಅಂದುಕೊಂಡ ಗುರಿ ಸಾಧಿಸಬಹುದು. ಇದು ಡಿಜಿಟಲ್ ಯುಗ. ಎಲ್ಲವೂ ಕೈಬೆರಳಲ್ಲೇ ಸಿಗುತ್ತದೆ. ಸತತ ಪರಿಶ್ರಮ, ಕಠಿಣ ಅಭ್ಯಾಸದಿಂದ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Read also : ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ 112 ಹೊಯ್ಸಳ ಅಧಿಕಾರಿಗಳು

ಮಾಯಕೊಂಡ ಆಸ್ಪತ್ರೆಯಲ್ಲಿ ಕಳೆದ ಆರು ತಿಂಗಳಿನಿಂದ ವೈದ್ಯರೇ ಇಲ್ಲವಂತೆ. ವಿದ್ಯುತ್ ಹೋಗುವುದು ಸಾಮಾನ್ಯವಾಗಿಬಿಟ್ಟಿದೆ. ನಾವು ಯಾವ ಶತಮಾನದಲ್ಲಿ ಬದುಕುತ್ತಿದ್ದೇವೆ ಎಂಬ ಪ್ರಶ್ನೆ ಎದ್ದಿದೆ. 24 ಗಂಟೆ ವಿದ್ಯುತ್ ಜನರಿಗೆ ಕೊಡಿಸುವ ಹಾಗೂ ವೈದ್ಯರನ್ನು ಕರೆತರುವ ಶಕ್ತಿ ನಮ್ಮಲ್ಲಿ ಇಲ್ಲದಂತಾಗಿದೆ. ಇದು ಬೇಸರದ ಸಂಗತಿ ಎಂದು ಹೇಳಿದರು.

ಶಾಸಕರು ಏನು ಮಾಡಲು ಆಗುತ್ತದೆ ಎಂದು ಜನರು ಹೇಳುತ್ತಾರೆ. ನಾವು ಅಸಹಾಯಕವಾಗಿ ಬದುಕುವಂಥ ಸ್ಥಿತಿಯಲ್ಲಿದ್ದೇವೆ. ನೀವು ಆರಿಸಿ ಕಳುಹಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಇದ್ದಾರೆ. ಎಲ್ಲಾ ಬೇಡಿಕೆ ಈಡೇರಿಸುತ್ತೇವೆ, ನಿಮ್ಮ ಸಮಸ್ಯೆ ಪರಿಹರಿಸುತ್ತೇವೆ ಎಂದು ಹೇಳಿದ್ದರು. ಆದ್ರೆ. ನಿಮ್ಮ ಸಮಸ್ಯೆಗಳು ಪರಿಹಾರ ಆಗಿವೆಯಾ? ಒಮ್ಮೆಯಾದರೂ ಇಲ್ಲಿಗೆ ಬಂದು ನಿಮ್ಮ ಸಂಕಷ್ಟ ಕೇಳಿದ್ದಾರಾ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ರೈತ ಹೋರಾಟಗಾರರಾದ ಪ್ರತಾಪ್ ಗೌಡ್ರು, ಅಶೋಕ್, ಹಿಂಡಸಗಟ್ಟೆ ಹನುಮಂತಪ್ಪ, ಟಿ. ರವಿಕುಮಾರ್, ಮಧುಕುಮಾರ್, ಕಲ್ಲೇಶ್, ರಾಘವೇಂದ್ರ ಮತ್ತಿತರರು ಹಾಜರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕಾಣೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ 112 ಹೊಯ್ಸಳ ಅಧಿಕಾರಿಗಳು
Next Article Davanagere ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

ಬಿಎಸ್‌ಎಫ್‌ನಲ್ಲಿ 3,588 ಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಘೋಷಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಆ. 25 ರವರೆಗೆ…

By Dinamaana Kannada News

ದಾವಣಗೆರೆ : ಜಲಸಿರಿ ನೀರಿನ ಶುಲ್ಕ ಪಾವತಿಸಲು ಸೂಚನೆ

ದಾವಣಗೆರೆ : ಮಹಾನಗರಪಾಲಿಕೆ ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನೀರಿನ ಶುಲ್ಕ ಪಾವತಿಸುತ್ತಿರುವ ನೀರಿನ ಬಳಕೆಗೆ ಅನುಗುಣವಾಗಿ ನಿಗದಿಪಡಿಸಿರುವ ನೀರಿನ ದರಗಳ…

By Dinamaana Kannada News

ದಾವಣಗೆರೆ | ಕಟ್ಟಡ ಕಾರ್ಮಿಕರ ಸೌಲಭ್ಯ ವಿಳಂಬ ನೀತಿ ತಪ್ಪಿಸಲು ಸಚಿವರಿಗೆ ಮನವಿ

ದಾವಣಗೆರೆ :   ಕಟ್ಟಡ ಕಾರ್ಮಿಕರ ಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?