Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್
ತಾಜಾ ಸುದ್ದಿ

Davanagere | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದರೆ ಕಠಿಣ ಕ್ರಮ : ಎಸ್ಪಿ ಉಮಾಪ್ರಶಾಂತ್

Dinamaana Kannada News
Last updated: June 19, 2025 3:30 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ನಕಲಿ ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು   ಎಸ್ಪಿ   ಉಮಾಪ್ರಶಾಂತ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಸಮಾನತೆ ಕಲ್ಪಸಲು ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಕೆಲವೊಂದಿಷ್ಟು ಸಮುದಾಯಗಳು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುವ ಮೂಲಕ ನೈಜವಾಗಿ ತುಳಿತಕ್ಕೆ ಒಳಗಾದ ಫಲಾನುಭವಿಗಳಿಗೆ ಅನ್ಯಾಯವೆಸಗುತ್ತಿವೆ ಎಂದರು.

ದಲಿತ ಸಂಘರ್ಷ ಸಮಿತಿಯ ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ,  ವೀರಶೈವ  ಜಂಗಮರು ಪರಿಶಿಷ್ಟ ಜಾತಿಯ ಬುಡ್ಗ ಜಂಗಮರ ಹೆಸರಿನಲ್ಲಿ ಪ.ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ  ವೀರಶೈವ ಜಂಗಮರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ  ಮೂಲ ಜಾತಿಗಳಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಎಷ್ಟೇ ಹೋರಾಟ ಮಾಡಿದರು. ಜಿಲ್ಲಾ, ತಾಲೂಕ ಆಡಳಿತಗಳು ಸೂಕ್ತ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬುಡ್ಗ ಜಂಗಮರು ಕಾಡುಪ್ರಾಣಿಗಳನ್ನು ಹಂದಿ, ಇಲಿ, ಹೆಗ್ಗಣ ಮುಂತಾದ ಪ್ರಾಣಿಗಳನ್ನು ಸೇವೆನೆ ಮಾಡುತ್ತಿದ್ದರು. ವೀರಶೈವ ಜಂಗಮರು ಲಿಂಗಾಯಿತರಲ್ಲಿ ಅತ್ಯಂತ ಶ್ರೇಷ್ಠ ಶ್ರೇಣಿಯಲ್ಲಿದ್ದಾರೆ. ಅದರೆ, ಈಗ  ದಲಿತರ ಸೌಲಭ್ಯಗಳಿಗೆ ಕನ್ನ ಹಾಕುತ್ತಿದ್ದಾರೆ. ಇದು ಅಧಿಕಾರಿಗಳ ನಿರ್ಲಕ್ಷ್ಯತನ ತೋರುತ್ತಿದೆ ಎಂದರು.

ಈ ಕುರಿತು ದಲಿತ ಮುಖಂಡರೊಬ್ಬರ ಆರೋಪಕ್ಕೆ ಸ್ಪಂದಿಸಿದ ಎಸ್ಪಿ ಉಮಾಪ್ರಶಾಂತ್ ಈ ಕುರಿತು ನಿರ್ದಿಷ್ಟವಾಗಿ ಪ್ರಕರಣಗಳು ಕಂಡು ಬಂದಿದ್ದು, ಮಾಹಿತಿ ಇದ್ದಲ್ಲಿ ದೂರು ನೀಡಿ, ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.

Read also : Harihara | ಅಪ್ರಾಪ್ತೆಯ ಮದುವೆ, ಅತ್ಯಾಚಾರ: ಆರೋಪಿಗೆ 21 ವರ್ಷ ಶಿಕ್ಷೆ

ಜಗಳೂರಿನ ದಲಿತ ಮುಖಂಡರೊಬ್ಬರು ಮಾತನಾಡಿ, ಇಂದಿನ ಆಧುನಿಕತೆಯ ಜಗತ್ತಿನಲ್ಲಿದ್ದರೂ ಸಹ ಇಂದಿಗೂ ಅಸ್ಪೃಶ್ಯತೆ ತಾಂಡವಾಡುತ್ತಿದೆ. ಕೆಲವು ಪುಣ್ಯಸ್ಥಳಗಳ ದೇವಸ್ಥಾನಗಳಿಗೆ ಮುಕ್ತ ಪ್ರವೇಶವಿಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮತ್ತೊಬ್ಬ ದಲಿತ ಮುಖಂಡ ಮಾತನಾಡಿ ಪ್ರಸ್ತುತ ಹರಿಜನರನ್ನು ಗುರಿಯಾಗಿಸಿಕೊಂಡು ಮತಾಂತರಿಸುವಂತಹ ಪ್ರಕರಣಗಳು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚಿರುವ ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದ ಜನನಿಬಿಡ ಪ್ರದೇಶಗಳಲ್ಲಿ ಜಾತೀಯತೆ, ಬಾಲ್ಯವಿವಾಹದಂತಹ ಜಾಗೃತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುವುದು. ಆದಾಗ್ಯೂ ತಮಗೆ ಇಂತಹ ಪ್ರಕರಣಗಳ ಕುರಿತು ನಿಖರ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದರೂ ಕೂಡ ಶೇ.80 ಕ್ಕೂ ಅಧಿಕ ಪ್ರಕರಣಗಳು ಬೀಗ ಹಾಕಿದ ಹಾಗೂ ಒಂಟಿ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ಅವಶ್ಯಕತೆ ಇರುವಲ್ಲಿ ಸಿಸಿಟಿವಿಗಳನ್ನು ಅಳವಡಿಸಿ. ಅವುಗಳಿಂದ ತನಿಖೆಗೆ ಸಹಾಯವಾಗುತ್ತದೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದಲ್ಲಿ ಮಾಹಿತಿ ನೀಡಿದರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಹಾಯವಾಗಲಿದೆ ಎಂದರು.

ಸಭೆಯಲ್ಲಿ ಪ್ರಸ್ತಾಪಿಸಿದ ದೂರುಗಳ ಪೈಕಿ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಲಾಗುವುದು. ಹಾಗೆಯೇ ಇನ್ನಿತರೆ ಇಲಾಖೆಗಳ ದೂರುಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ಕಳಹಿಸಿ ವರದಿ ಪಡೆಯಲಾಗುತ್ತದೆ ಎಂದ ಅವರು, ಎಲ್ಲಾ ಸಮುದಾಯದವರು ಯಾವುದೇ ಜಾತಿ ವೈಷಮ್ಯಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಬಾಳಬೇಕು. ಹೆಲ್ಮೆಟ್ ಧರಿಸಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ಉತ್ತಮ ನಾಗರೀಕ  ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಬಸವರಾಜ್, ನಗರ ಪೊಲೀಸ್ ಉಪಾಧೀಕ್ಷಕ ಬಿ.ಶರಣಬಸವೇಶ್ವರ ಸೇರಿದಂತೆ ವಿವಿಧ ಸಂಘನಟನೆಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara | ಅಪ್ರಾಪ್ತೆಯ ಮದುವೆ, ಅತ್ಯಾಚಾರ: ಆರೋಪಿಗೆ 21 ವರ್ಷ ಶಿಕ್ಷೆ
Next Article Davanagere ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ವೈದ್ಯೆ ಮೇಲಿನ ದೌರ್ಜನ್ಯ ಖಂಡಿಸಿ ಮೌನ ಪ್ರತಿಭಟನೆ

ಚನ್ನಗಿರಿ (Davanagere)  :  ಕಲ್ಕತ್ತಾದಲ್ಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ  ನಾಗರೀಕ ಅಧಿಕಾರ ಸಂರಕ್ಷಣಾ…

By Dinamaana Kannada News

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು…

By Dinamaana Kannada News

ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆ

ದಾವಣಗೆರೆ :  ಒರಿಸ್ಸಾದಿಂದ  ಬೆಂಗಳೂರಿಗೆ ಹೋಗುವ ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆಯಾಗಿದೆ. ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?