Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ತಾಜಾ ಸುದ್ದಿ

ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Dinamaana Kannada News
Last updated: October 19, 2025 5:51 am
Dinamaana Kannada News
Share
Davanagere
SHARE

ದಾವಣಗೆರೆ :  ಕೆರೆ ಹೂಳೆತ್ತುವ ವೇಳೆ ತೆಗೆಯುವ ಮಣ್ಣನ್ನು ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಯಾವುದೇ ಕೆರೆಗಳಲ್ಲಿ ರೈತರು  ತೋಟ, ಹೊಲಗಳಿಗೆ ಮಣ್ಣು ಬಳಸಿಕೊಳ್ಳಬಹುದು. ಇದರಿಂದ ಕೆರೆಯ ನೀರಿನ ಸಂಗ್ರಹಣಾ ಸಾಮಥ್ರ್ಯ ಹೆಚ್ಚುವ ಜೊತೆಗೆ ರೈತರ ಜಮೀನಿನ ಫಲವತ್ತತೆ ಹೆಚ್ಚಿ ರಸಗೊಬ್ಬರಗಳ ಬಳಕೆ ಪ್ರಮಾಣ ಕಡಿಮೆ ಮಾಡುವರು. ಆದರೆ ಆಳವಾಗಿ ತೆಗೆಯಲು ಮತ್ತು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ, ಮಾಡಿದಲ್ಲಿ ರಾಜಧಾನ ಪಾವತಿ ಮತ್ತು ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಆದರೆ ಕೃಷಿ ಚಟುವಟಿಕೆಗಳಿಗೆ ಅನುಮತಿ ಬೇಕಿಲ್ಲ ಎಂದು ಸಷ್ಟಪಡಿಸಿದರು.

ಆದ್ದರಿಂದ ಅಧಿಕಾರಿಗಳು ತಾಲ್ಲೂಕುವಾರು ಊಳೆತ್ತಲು ಅರ್ಹವಿರುವ ಕೆರೆಗಳ ಸಮಗ್ರ ವರದಿ ಒಂದು ವಾರದೊಳಗೆ ನೀಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಡಿಸೆಂಬರ್ ಅಂತ್ಯಕ್ಕೆ ಮರಳು ಲಭ್ಯ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಹಲವು ದೂರುಗಳು ಕೇಳಿ ಬರುತ್ತಿವೆ. ಹಾಗಾಗಿ ಅಂತವರ ಮೇಲೆ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ನಿಯಮಾನುಸಾರ ವೇ-ಬ್ರಿಡ್ಜ್ಗಳಲ್ಲಿ ತೂಕ ನಿರ್ದಿಷ್ಟವಾಗಿದ್ದರೂ, ತದನಂತರ ನಿಗದಿತ ತೂಕಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಸಾಗಾಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ವಾಹನಗಳ ಮೇಲ್ಪದರಗಳಲ್ಲಿ ಎಂಸ್ಯಾಂಡ್ ಮತ್ತು ಮಧ್ಯ ಭಾಗದಲ್ಲಿ ಮರಳು ತುಂಬಿ, ಎಂಸ್ಯಾಂಡ್ ರೂಪದಲ್ಲಿ ಮರಳು ಸಾಗಾಣೆ ಮಾಡುತ್ತಿರುವ ಬಗ್ಗೆ ದೂರುಗಳಿವೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಜಿಲ್ಲೆಯಲ್ಲಿ  24 ಮರಳು ಬ್ಲಾಕ್ ಗಳನ್ನು ಗುರುತಿಸಿ ಟೆಂಡರ್ ಅಂತಿಮಗೊಳಿಸಲಾಗಿದೆ.ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

Read also : ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ : ಡಿಸಿ

19 ಮರಳು ಬ್ಲಾಕ್‍ಗಳಿಗೆ ಟೆಂಡರ್:
ಜಿಲ್ಲಾದ್ಯಾಂತ ಒಟ್ಟು 24 ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈ ಪೈಕಿ 4 ಬ್ಲಾಕ್ ಸರ್ಕಾರಿ ಕಾಮಗಾರಿಗಳಿಗೆ, 19 ಬ್ಲಾಕ್‍ಗಳು ಸಾರ್ವಜನಿಕ ಉಪಯೋಗಕ್ಕೆ ನಿಗದಿಪಡಿಸಿದ್ದು, ಟೆಂಡರ್ ಅಂತಿಮವಾಗಿದೆ. ಇನ್ನೂ ಒಂದು ಬ್ಲಾಕ್ ಮಾತ್ರ ಬಾಕಿ ಇದೆ. ಟೆಂಡರ್‍ದಾರರು ಷರತ್ತುಗಳನ್ವಯ ಮರಳು ಪೂರೈಕೆ ಮಾಡಲಾಗುತ್ತದೆ.

ಬ್ಲಾಕ್ ವಿವರ: ಹರಿಹರ ತಾಲ್ಲೂಕಿನ ಗೋವಿನಾಳು, ಎಲೆಹೊಳೆ, ಚಿಕ್ಕಬಿದರೆ, ಗುತ್ತೂರು, ಮಳಲಹಳ್ಳಿ ಹಾಗೂ ಬಿಲಾಸನೂರು, ಹೊನ್ನಾಳಿ ತಾಲ್ಲೂಕಿನ ಬುಳ್ಳಾಪುರ, ಚಿಕ್ಕಬಸಾಪುರ, ರಾಂಪುರ, ಬಿಳೆಮಲ್ಲೂರು, ಹಿರೇಬಸೂರು, ಬುಳ್ಳಾಪುರ, ಬೀರಗೊಂಡನಹಳ್ಳಿ ಮತ್ತು ಬಾಗೇವಾಡಿ ವ್ಯಾಪ್ತಿಯಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಗೋವಿನಕೋವಿ, ಮಾರಿಗೊಂಡನಹಳ್ಳಿ, ತಗ್ಗಿಹಳ್ಳಿ ಮತ್ತು ಕೋಟೆಹಾಳ್‍ನಲ್ಲಿ ಮರಳು ಬ್ಲಾಕ್ ಗುರುತಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ : ಡಿಸಿ
Next Article Prasanandapuri Swamiji ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸೂಕ್ತ ಕ್ರಮಕ್ಕೆ ಪ್ರಸನಾನಂದಪುರಿ ಸ್ವಾಮೀಜಿ ಒತ್ತಾಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಶಾಂತಿ, ಸೌಹಾರ್ಧತೆ ಕಾಪಾಡಿ ದಾವಣಗೆರೆ ಅಭಿವೃದ್ದಿಗೆ ಶ್ರಮಿಸೋಣ : ಸಚಿವ ಮಲ್ಲಿಕಾರ್ಜುನ್‌

ದಾವಣಗೆರೆ.ಸೆ.24 (Davanagere)  ;  ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ…

By Dinamaana Kannada News

ಅಂತಿಮ ಮತದಾರರ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ 14 ಲಕ್ಷ ಮತದಾರರು

ದಾವಣಗೆರೆ ಜ.07 (Davangere): ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಅಂತಿಮ ಮತದಾರರ ಪಟ್ಟಿಯನ್ನು…

By Dinamaana Kannada News

ಜಿಲ್ಲಾಸ್ಪತ್ರೆ ಪುನರ್ ನಿರ್ಮಿಸಿ, ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆ, ಅಕ್ಕಪಕ್ಕದ ಮರ‍್ನಾಲ್ಕು ಜಿಲ್ಲೆಗಳ ಬಡ ರೋಗಿಗಳ ಜೀವನಾಡಿ. ಆದರೆ ವೆಂಟಿಲೇಟರ್ ಕೊರತೆಯಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?