ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಾಂಕೇತಿಕವಾಗಿ ದ್ವಿಪ್ರತಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಛೇರಿಗೆ ಪತಿ, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರೊಂದಿಗೆ ತೆರಳಿದ ಪ್ರಭಾ ಮಲ್ಲಿಕಾರ್ಜುನ್ ಜಿಲ್ಲಾ ಚುನಾವಣಾಧಿಕಾರಿ ಡಾ|| ಎಂ.ವಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ದಾವಣಗೆರೆ ನಗರದೇವತೆ ದುರ್ಗಾಂಭಿಕ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕರಾದ ಕೆ.ಎಸ್.ಬಸವಂತಪ್ಪ, ದೇವೆಂದ್ರಪ್ಪ, ಶ್ರೀಮತಿ ಲತಾ ಮಲ್ಲಿಕಾರ್ಜುನ್, ವಕೀಲರಾದ ಸೈಯದ್ ಸಲೀಂ, ಕುರುಬ ಸಮಾಜದ ಗಣೇಶ್ ಉಪಸ್ಥಿತರಿದ್ದರು.