Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: April 8, 2025 1:26 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸರ್ಕಾರಗಳೇ ಸರ್ಕಾರಿ ಶಾಲೆಗಳನ್ನು ಸಾಯಿಸುತ್ತಿವೆ. ಕಣ್ಮುಂದೆ ನಡೆಯುತ್ತಿರುವ ಕ್ರೈಂ ಹಾಗೂ ದುರಂತ. ವಿದ್ಯಾವಂತರು ರಾಜಕಾರಣಕ್ಕೆ ಬರಬೇಕು. ವಿದ್ಯಾವಂತರು, ಪ್ರಜ್ಞಾವಂತ ಯುವಕ, ಯುವತಿಯರು ರಾಜಕೀಯಕ್ಕೆ ಬನ್ನಿ. ಅವಕಾಶ ಸಿಗಲಿಲ್ಲ ಎಂದು ಕೊರಗುವುದು ಬೇಡ. ಅವಕಾಶ ಸಿಗದಿದ್ದರೆ ಹಿಂದೆ ಸರಿಯಬೇಡಿ. ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ಇಲ್ಲದಿದ್ದರೆ ಸದಾ ಶೋಷಿತರಾಗುತ್ತವೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಕರೆ ನೀಡಿದರು.

ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಸ್ನೇಹ ಬಳಗ ನವ ತರುಣ ನಾಟ್ಯ ಕಲಾ ಸಂಘವು ಆಂಜನೇಯ ಸ್ವಾಮಿ ರಥೋತ್ಸವದ ಪ್ರಯುಕ್ತ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾಜುನ ನಾಟಕ ವೇದಿಕೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣದ ಕ್ರಾಂತಿ ಆಗಬೇಕೆಂದು ರಾಜ್ಯಾದ್ಯಂತ ಓಡಾಡುತ್ತಿದ್ದೇನೆ. ಹಳ್ಳಿ ಮಕ್ಕಳು ಅಡ್ಡದಾರಿ ಹಿಡಿಯಬಾರದು. ಗ್ರಾಮೀಣ ಪ್ರದೇಶದ ಮಕ್ಕಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು. ಸರ್ಕಾರಿ ಶಾಲೆಗಳು ಉದ್ದಾರ ಆಗಬೇಕು. ಇಲ್ಲಿ ಓದಿದವರು ಸಬ್ ಇನ್ ಸ್ಪೆಕ್ಟರ್, ತಹಶೀಲ್ದಾರ್, ಎಸಿ, ಐಎಎಸ್, ಕೆಎಎಸ್ ಅಧಿಕಾರಿಗಳಬೇಕು ಎಂಬ ಕನಸು ನನ್ನದು. ಸರ್ಕಾರಿ ಶಾಲೆಗಳು ಸತ್ತು ಹೋದರೆ ಕನ್ನಡವೇ ಸತ್ತು ಹೋಗುತ್ತವೆ. ಕನ್ನಡ ಭಾಷೆ ಸತ್ತು ಹೋದರೆ ಇಂಥ ನಾಟಕಗಳನ್ನು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು.

ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿದ್ದೆ. ನೀವೆಲ್ಲರೂ ಸಹಕಾರ ನೀಡಿದ್ದೀರಿ. ಪ್ರೀತಿ, ವಿಶ್ವಾಸ ಕೊಟ್ಟಿದ್ದೀರಾ. ಅದನ್ನು ಮರೆಯಲು ಸಾಧ್ಯವೇ ಇಲ್ಲ. ನಾನು ಜಗಳೂರು ಮತ್ತು ಹರಪನಹಳ್ಳಿಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಆದರೂ ಜನರು ಪ್ರೀತಿ ತೋರಿ ಆಹ್ವಾನ ನೀಡುತ್ತಿದ್ದಾರೆ. ಹಾಗಾಗಿ ಬಂದಿದ್ದೇನೆ. ಹೊನ್ನಾಳಿ ಮತ್ತು ಹರಿಹರದಲ್ಲಿ ಓಡಾಡುತ್ತಿದ್ದೇನೆ. ಆಂಜನೇಯ ಸ್ವಾಮಿ ಆಶೀರ್ವಾದ ಏನು ಸಿಗುತ್ತೋ ಮುಂದಿನ ದಿನಗಳಲ್ಲಿ ನೋಡಬೇಕಿದೆ ಎಂದು ತಿಳಿಸಿದರು.

ಇನ್ ಸೈಟ್ಸ್ ಐಎಎಸ್ ಸಂಸ್ಥೆಯಲ್ಲಿ ಸುಮಾರು ಒಂದೂವರೆ ಸಾವಿರ ವಿದ್ಯಾರ್ಥಿಗಳು ಐಎಎಸ್ ಓದಿ ಈಗ ಉನ್ನತ ಅಧಿಕಾರಿಗಳಾಗಿದ್ದಾರೆ. ಇದು ಖುಷಿಯ ವಿಚಾರ. ನಿಮ್ಮ ಮಕ್ಕಳನ್ನೂ ಅಧಿಕಾರಿಗಳನ್ನಾಗಿಸಿ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ಸಲಹೆ ನೀಡಿದರು.

Read also : Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವೇದಿಕೆ ನೀಡದಿದ್ದರೆ ಯಾರೂ ಪರಿಚಯವಾಗಲ್ಲ. ವೇದಿಕೆ ಸೃಷ್ಟಿಸಿದರೆ ಯುವಕರಿಗೆ ಅವಕಾಶ ಸಿಗುತ್ತದೆ. ಹರಪನಹಳ್ಳಿ ತಾಲೂಕಿನಲ್ಲಿ ಪ್ರಜ್ಞಾವಂತರು, ಹೋರಾಟಗಾರರಿಗೆ ಇದುವರೆಗೆ ಅವಕಾಶ ಸಿಕ್ಕಿಲ್ಲ. ಇಂಥವರಿಗೆ ಅವಕಾಶ ಕೊಟ್ಟರೆ ನಿಮಗೆ ಒಳ್ಳೆಯದು ಮಾಡುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

ಈ ವೇಳೆ ರಾಗಿಮಸಲವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಶೇಖರ್ ಗೌಡ, ಸುರೇಶ್ ಸೊಕ್ಕೆ, ಶಂಭುಲಿಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್. ಜಯಮ್ಮ, ಸದಸ್ಯ ಸೋಮಪ್ಪ, ಮಂಜುನಾಥ್,  ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಕಾರ್ಯದರ್ಶಿ ಎನ್. ಎಸ್. ರವಿಕುಮಾರ್, ಗ್ರಾಮದ ಹಿರಿಯರಾದ ಮಲ್ಕಪ್ಪ, ಡಿ ಮೈಲಪ್ಪ, ಮಾಜಿ ಸೈನಿಕರು ನಿರಂಜನ್, ಸಿಜಿ ಚಿಕ್ಕಗೌಡ್ರು, ದೊಡ್ಡೇಶ್, ದೊಡ್ಮನಿ ಮಾಂತೇಶಪ್ಪ ಮತ್ತಿತರರು ಹಾಜರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Next Article kunduavada vellege 19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಜಗಮಗಿಸುತ್ತಿದೆ ಗ್ರಾಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

22 ಕೆರೆಗಳ ಅಭಿವೃದ್ಧಿ- ಭದ್ರಾ ಕಾಲುವೆಗಳ ಆಧುನೀಕರಣಕ್ಕೆ ಅನುದಾನ ಬಿಡುಗಡೆಗೆ ಶಾಸಕ ಬಸವಂತಪ್ಪ ಮನವಿ

ದಾವಣಗೆರೆ (Davanagere): ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ 22 ಕೆರೆಗಳ ಏತ ನೀರಾವರಿ ಯೋಜನೆ ಹೊಸ ಪೈಪ್ ಲೈನ್ ಕಾಮಗಾರಿ ಮತ್ತು…

By Dinamaana Kannada News

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ ಭಾರತ ದೇಶದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಹೆಸರಿನಲ್ಲಿ ರಾಜ್ಯಾದ್ಯಂತ ಸಂವಿಧಾನ…

By Dinamaana Kannada News

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ.…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ

By Dinamaana Kannada News
Davanagere
ತಾಜಾ ಸುದ್ದಿ

ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

By Dinamaana Kannada News
Political analysis
ರಾಜಕೀಯ

Political analysis|ಅರಸು, ಕೃಷ್ಣ,ಯಡಿಯೂರಪ್ಪ ಅವರಿಗೆ ನಸೀಬು ಇತ್ತು

By Dinamaana Kannada News
Davanagere
ತಾಜಾ ಸುದ್ದಿ

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?