Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

Davanagere | ಒತ್ತಡ ಮುಕ್ತ ಜೀವನಕ್ಕೆ ಪುಸ್ತಕ ಸಹಕಾರಿ : ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: November 14, 2024 1:03 pm
Dinamaana Kannada News
Share
Swiller Jubilee Branch Library
Swiller Jubilee Branch Library
SHARE

ದಾವಣಗೆರೆ ನ.13 (Davanagere): ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದಲ್ಲಿ ಸದಾ ಬೆಳೆಸಿಕೊಂಡರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು

ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ, ದಾವಣಗೆರೆ ಇವರ ವತಿಯಿಂದ ನಗರದ ಸ್ವಿಲರ್ ಜ್ಯೂಬಲಿ ಶಾಖಾ ಗ್ರಂಥಾಲಯದಲ್ಲಿ ನ. 14 ರಂದು ಆಯೋಜಿಸಲಾಗಿದ್ದ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರಂಭ  ಉದ್ಘಾಟಿಸಿ ಮಾತನಾಡಿದರು.

ಪೋಷಕರು ಮಕ್ಕಳನ್ನು ಪುಸ್ತಕ ಹಾಗೂ ಕಥೆಗಳನ್ನು ಕಲಿಯಲು ಪ್ರೋತ್ಸಾಹಿಸಬೇಕು. ಅದು ಅವರಿಗೆ ಜೀವನದ ಒತ್ತಡ ಮುಕ್ತ ಜೀವನಕ್ಕೆ ಬದಲಾಯಿಸಲು ಪ್ರೇರೇಪಿಸುತ್ತದೆ. ಮತ್ತು ಅವರಿಗೆ ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು.

ಗ್ರಂಥಾಲಯದಲ್ಲಿ ಗಣಕಯಂತ್ರಗಳನ್ನು, ಹಾಗೂ ಇನ್ನೂ ಹೆಚ್ಚಿನ ಪುಸ್ತಕಗಳನ್ನು ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅಂತಹ ಮಾರ್ಗದಲ್ಲಿ ಅವರಿಗೆ ಕಲಿಯಲು ಪ್ರೋತ್ಸಾಹ ನೀಡಬೇಕು. ಹಾಗೂ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಅಲ್ಪ ಸಮಯ ಮಾಡಿಕೊಂಡು ಇತಿಹಾಸಕಾರರು, ಸಾಹಿತಿಗಳ ಹಾಗೂ ಸಂವಿಧಾನದ ಬಗ್ಗೆ ಓದುವ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸಾರ್ವಜನಿಕರಿಗಾಗಿ ಎಸ್.ಎಸ್‌ಕೇರ್ ಟ್ರಸ್ಟ್ನಿಂದ ಡಯಾಬಿಟಿಸ್ ಬಗ್ಗೆ ಉಚಿತವಾಗಿ ಪರೀಕ್ಷೆ ಮಾಡಲಾಗುವುದು. ಹಾಗೂ ಚಲ್ಡ್ಕೇರ್ ಟ್ರಸ್ಟ್ನಿಂದ ಮಕ್ಕಳ ಮಧುಮೇಹ ಉಚಿತವಾಗಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ಮಾತನಾಡಿ ಗ್ರಂಥಾಲಯ ಇಲಾಖೆಯವರು  ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಲು  ಜಾಗ ಕೇಳಿದರೆ ನಿವೇಶನ ನೀಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಯಾರು ಕಷ್ಟಪಟ್ಟು ಓದುತ್ತಾರೋ, ಅಂತಹವರು ಮುಂದೆ ಬರುತ್ತಾರೆ, ಓದಿ ಒಳ್ಳೆಯ ನಾಗರೀಕರಾಗುತ್ತಾರೆ. ನಮ್ಮ ಜಿಲ್ಲೆಗೆ ವಿದ್ಯಾರ್ಥಿಗಳಿಂದ ಇನ್ನೂ ಮಹತ್ತರವಾದ ಹೆಸರು ಬರುವಂತಾಗಲಿ ಎಂದು ಆಶಿಸಿದರು.

ಹಿರಿಯ ಪತ್ರಕರ್ತರಾದ ಹೆಚ್.ಬಿ. ಮಂಜುನಾಥ್ ಉಪನ್ಯಾಸ ನೀಡಿದರು.

ಮಹಾಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕೆ, ಪಾಲಿಕೆ ಸದಸ್ಯರಾದ ಎಸ್.ಟಿ.ವಿರೇಶ್, ಲೇಖಕರು, ಸಾಹಿತಿಗಳಾದ ಟಿ.ಎಸ್.ಶೈಲಜಾ, ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಪಿ.ಆರ್.ತಿಪ್ಪೇಸ್ವಾಮಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Read also : Davanagere | ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ : ಡಿಸಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಸೇವಾ ಮನೋಭಾವ ಮೂಡಿದಾಗ ಸದಾ ಕ್ರಿಯಾಶೀಲರಾಗಲು ಸಾಧ್ಯ : ಡಿಸಿ
Next Article davanagere Davanagere | ರೈಲ್ವೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬಯಲುಸೀಮೆ ‘ಯುಗಾದಿ ಸಂಭ್ರಮ’

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ  ಮರಳಿ ಮರಳಿ ತರುತಿದೆ. - ವರಕವಿ…

By Dinamaana Kannada News

Davanagere | ಅ. 20 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

ದಾವಣಗೆರೆ ಅ.14 (Davanagere) ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅ. 20 ರಂದು ಬೆಂಗಳೂರು ನಗರ…

By Dinamaana Kannada News

JOB NEWS | ವಿಪತ್ತು ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ  ಮಾ.10 (Davanagere):  ನಗರದ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರದಲ್ಲಿ ತೆರವಾಗಿರುವ ಜಿಲ್ಲಾ ವಿಪತ್ತು ಪರಿಣಿತರ  ಹುದ್ದೆಗೆ ಒಂದು ವರ್ಷದ ಗುತ್ತಿಗೆ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?