Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ
ತಾಜಾ ಸುದ್ದಿ

ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಿ, 3 ದಿನಗಳಲ್ಲಿ 2 ಸಾವಿರ ಮೆಟ್ರಿಕ್ ಟನ್ ಯೂರಿಯಾ ಪೂರೈಕೆ : ಡಿಸಿ

Dinamaana Kannada News
Last updated: July 23, 2025 1:25 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ : ಜಿಲ್ಲೆಗೆ ಮುಂದಿನ ಮೂರು ದಿನಗಳಲ್ಲಿ 2050 ಮೆಟ್ರಿಕ್ ಟನ್ ಯೂರಿಯಾ ಪೂರೈಕೆಯಾಗಲಿದ್ದು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಸಕ್ತ ಸಾಲಿನ ಕೃಷಿ ಇಲಾಖಾ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಮಾಯಕೊಂಡ, ಜಗಳೂರು, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಗೆ ಯೂರಿಯಾವನ್ನು ಮೇಲುಗೊಬ್ಬರವಾಗಿ ಬಳಕೆ ಮಾಡುತ್ತಿದ್ದು ಮುಂದಿನ 15 ದಿನಗಳಲ್ಲಿ ಇದು ಪೂರ್ಣಗೊಳ್ಳುತ್ತದೆ. ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿರುವುದರಿಂದ ಭತ್ತದ ಕೃಷಿ ಚಟುವಟಿಕೆಗಳು ಆರಂಭವಾಗಲಿವೆ. ಭತ್ತಕ್ಕೆ ತಳಗೊಬ್ಬರವಾಗಿ ಯೂರಿಯಾ ಬಳಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ತರಹದ ರಸಗೊಬ್ಬರದ ಕೊರತೆ ಉಂಟಾಗಿರುವುದಿಲ್ಲ. ಜಿಲ್ಲೆಗೆ ಅಗತ್ಯಕ್ಕೆ ತಕ್ಕ ರಸಗೊಬ್ಬರ ಪೂರೈಕೆಯಾಗುತ್ತಿದೆ. ಭತ್ತ ಬೆಳೆಗೆ ರಸಗೊಬ್ಬರ ಮಾರಾಟಗಾರರು ಗೊಬ್ಬರದ ದಾಸ್ತಾನಿಟ್ಟಿರುವುದರಿಂದ ಮಾರುಕಟ್ಟೆಯಲ್ಲಿ ಗೊಬ್ಬರ ಇಲ್ಲವೆಂದು ರೈತರಲ್ಲಿ ಆತಂಕ ಉಂಟಾಗಿದೆ. ಗೊಬ್ಬರವನ್ನು ಯಾವುದೇ ಮಾರಾಟಗಾರರು ಮಾರಾಟ ಮಾಡದೇ ದಾಸ್ತಾನಿಟ್ಟುಕೊಳ್ಳುವಂತಿಲ್ಲ. ರೈತರಿಗೆ ನೀಡದೆ ದಾಸ್ತಾನಿಟ್ಟಿರುವ ಗೋಡೌನ್‍ಗಳನ್ನು ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ಯಾವುದೇ ಮಾರಾಟಗಾರರು ಅನವಶ್ಯಕವಾಗಿ ಗೊಬ್ಬರ ದಾಸ್ತಾನಿಟ್ಟಲ್ಲಿ ಕಾನೂನು ಕ್ರಮಜರುಗಿಸಲಾಗುತ್ತದೆ. ರೈತರು ಸಹ ಯೂರಿಯಾ ಗೊಬ್ಬರವನ್ನು ಹೆಚ್ಚು ಬಳಸದೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕು. ನ್ಯಾನೋ ಯೂರಿಯಾ ಬಳಕೆ ಹರಳು ರೂಪದ ಯೂರಿಯಾಕ್ಕಿಂತಲೂ ಹೆಚ್ಚು ಗುಣಮಟ್ಟ, ಸಮೃದ್ದತೆ ಹೊಂದಿರುತ್ತದೆ. ಕೆಲವು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ಯೂರಿಯಾ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ವರದಿ ಬಂದಿದೆ. ರೈತರು ಸಹ ಯಾರಾದರೂ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಲ್ಲಿ ದೂರುಗಳನ್ನು ನೀಡಲು ಮುಂದೆ ಬರಬೇಕೆಂದು ತಿಳಿಸಿದರು.

Read also : ದಾವಣಗೆರೆ , ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಸಚಿವ ಶಿವಾನಂದ ಪಾಟೀಲ ಭರವಸೆ

ರೈತರು ಫಸಲಿನ ಹೆಚ್ಚು ಇಳುವರಿ ತೆಗೆಯಲು ಬೆಳೆ ಪರಿವರ್ತನೆ ಪದ್ದತಿಯನ್ನು ಅನುಸರಿಸಬೇಕು. ದ್ವಿದಳಧಾನ್ಯ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಇದರಿಂದ ರಸಗೊಬ್ಬರದ ಮೇಲಿನ ಹೆಚ್ಚು ಅವಲಂಭನೆ ತಪ್ಪುತ್ತದೆ. ಮತ್ತು ಬೆಳೆ ಪರಿವರ್ತನೆ ಅನುಸರಿಸದೇ ಒಂದೇ ಬೆಳೆ ಬೆಳೆಯುವುದು ಮತ್ತು ಇದಕ್ಕೆ ಹೆಚ್ಚು ರಸಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿ ಬೆಳೆಗಳಲ್ಲಿ ನುಸಿರೋಗ ಹೆಚ್ಚಳ ಮತ್ತು ಮುಳ್ಳು ಸಜ್ಜೆಯಂತಹ ಕಳೆ ಹೆಚ್ಚಾಗುತ್ತದೆ. ಇದರ ನಿಯಂತ್ರಣಕ್ಕಾಗಿ ರಾಸಾಯಿನಿಕ ಸಿಂಪರಣೆ ಮಾಡಬೇಕಾಗುತ್ತದೆ. ಇದು ರೈತರಿಗೆ ಆರ್ಥಿಕ ನಷ್ಟದ ಜೊತೆಗೆ ಕೂಲಿ ಕಾರ್ಮಿಕರ ಹೊರೆಯಾಗುತ್ತದೆ. ಆದ್ದರಿಂದ ಅಂತರ್ ಬೆಳೆಗಳು, ಬೆಳೆ ಪರಿವರ್ತನೆ ಜೊತೆಗೆ ನ್ಯಾನೋ ಯೂರಿಯಾ ಬಳಕೆಗೆ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.

TAGGED:Dinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ , ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಸಚಿವ ಶಿವಾನಂದ ಪಾಟೀಲ ಭರವಸೆ
Next Article G. B. Vinay Kumar ಜೀವನದಲ್ಲಿ ಸವಾಲು ಎದುರಿಸುವ ಕಠಿಣ ನಿರ್ಧಾರ ಮಾಡಿದರೆ ಸಾಧನೆ ಕಷ್ಟವೇನಲ್ಲ: ಜಿ. ಬಿ. ವಿನಯ್ ಕುಮಾರ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

ದಾವಣಗೆರೆ: ಅಂತಾರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ಭಾರತದ ಅತಿದೊಡ್ಡ ಫರ್ಟಿಲಿಟಿಚೈನ್‍ಗಳಲ್ಲಿ ಒಂದಾದ ನೋವಾ ಐವಿಎಫ್ ಫರ್ಟಿಲಿಟಿ ದಾವಣಗೆರೆಯಲ್ಲಿ ತೆರೆದಿದೆ. ಜೀವನಶೈಲಿಯ ಬದಲಾವಣೆಗಳು…

By Dinamaana Kannada News

ದಸರಾ ಉತ್ಸವಕ್ಕೆ ಚಾಲನೆ ನೀಡಿದ ಎಸ್.ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿತಾಯಿ ದುರ್ಗಾಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತವಾಗಿ…

By Dinamaana Kannada News

ಸ್ವಾಭಿಮಾನಕ್ಕೆ ಬಡತನ ಇರಬಾರದು, ಶ್ರೀಮಂತಿಕೆ ಇರಬೇಕು: ಜಿ. ಬಿ. ವಿನಯ್ ಕುಮಾರ್ ಸಲಹೆ

ದಾವಣಗೆರೆ (Davanagere): ಪ್ರತಿಯೊಬ್ಬರೂ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಸಂಪಾದಿಸಿಕೊಳ್ಳಿ. ಜ್ಞಾನ ಮತ್ತು ಒಳ್ಳೆಯ ಶಿಕ್ಷಣ ಪಡೆಯುವ ಮೂಲಕ ಸ್ವತಂತ್ರ…

By Dinamaana Kannada News

You Might Also Like

AC Tahsildar visits fertilizer shops
ತಾಜಾ ಸುದ್ದಿ

ದಾವಣಗೆರೆ ತಾಲ್ಲೂಕಿನ ರಸಗೊಬ್ಬರ ಅಂಗಡಿಗಳಿಗೆ ಎಸಿ.ತಹಶಿಲ್ದಾರ್ ಭೇಟಿ

By Dinamaana Kannada News
Alur Ningaraj
ತಾಜಾ ಸುದ್ದಿ

ದಾವಣಗೆರೆ | ನೇಮಕಾತಿ ಪ್ರಕ್ರಿಯೆಗಳು ಕೂಡಲೇ ಸ್ಥಗಿತಗೊಳಿಸಿ : ಆಲೂರು ಲಿಂಗರಾಜ್

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ |ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆಬೆಳೆಗೆ ಅರ್ಜಿ ಆಹ್ವಾನ

By Dinamaana Kannada News
Wild elephant attack: Hotapur labourer woman dies
ತಾಜಾ ಸುದ್ದಿ

ಕಾಡಾನೆ ದಾಳಿ: ಹೊಟ್ಯಾಪುರ ಕಾರ್ಮಿಕ ಮಹಿಳೆ ಸಾವು    

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?