Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ
ತಾಜಾ ಸುದ್ದಿ

ಶಿಕ್ಷಕಿಗೆ 22.40 ಲಕ್ಷ ರೂ. ವಂಚನೆ ಪ್ರಕರಣ: ಆರೋಪಿ ಬಂಧನ 1.90 ಲಕ್ಷ ರೂ. ವಶಕ್ಕೆ

Dinamaana Kannada News
Last updated: August 27, 2025 3:21 pm
Dinamaana Kannada News
Share
Accused arrested
SHARE
ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಶಿಕ್ಷಕಿಯೊಬ್ಬರಿಗೆ 22.40 ಲಕ್ಷ ರೂ. ವಂಚಿಸಿದ ಪ್ರಕರಣವನ್ನು ಭೇದಿಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೊರಟಿಕೆರೆ ಗ್ರಾಮದಲ್ಲಿ ವ್ಯವಸಾಯ ವೃತ್ತಿ ಮಾಡುವ ಅರುಣ್ ಕುಮಾರ್ (35) ಬಂಧಿತ ಆರೋಪಿ.
ಘಟನೆ ವಿವರ: 2025ರ ಫೆಬ್ರವರಿ 5 ರಂದು  ಪಿರ್ಯಾದಿ ಶಾಲೆಯಲ್ಲಿರುವಾಗ  ಬೆಳಿಗ್ಗೆ 09:30 ಗಂಟೆಗೆ +9672786862  ನಂಬರ್ ನಿಂದ ಕರೆ ಮಾಡಿ ನಾನು ಮುಂಬಯಿಯ ಬ್ಲೂ ಡಾಟ್ ಕೋರಿಯಾರ್ ಸರ್ವಿಸ್ ನ ವ್ಯಕ್ತಿ ಎಂದು ಅರೋಪಿ ಅರುಣ್ ಕುಮಾರ್ ಪರಿಚಯಿಸಿಕೊಂಡಿದ್ದಾನೆ.
ನಿಮ್ಮ ಫೆಡಕ್ಸ್ ಕೊರಿಯರ್ ನಲ್ಲಿ ಕೆಲವು ಔಷಧಗಳು  ಮುಂಬೈನಿಂದ  ದುಬೈಗೆ ಪಾರ್ಸಲ್ ಹೋಗುತ್ತಿದ್ದು, ಅದರಲ್ಲಿ ಡ್ರಗ್ಸ್ ಕೂಡ ಇದೆ ಎಂದು ಹೆದರಿಸಿ ನಿಮ್ಮ ಗುರುತನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಹೇಳಿ  ನಿಮ್ಮ ಮೇಲೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾನೆ. ನಂತರ  ಆಧಾರ್ ಕಾರ್ಡ್ ಮತ್ತು ಇ -ಮೇಲ್ ಐಡಿ ಹಾಕಿಸಿಕೊಂಡು 8983204966 ವಾಟ್ಸ್ ಆಪ್  ಕಾಲ್ ನಲ್ಲಿ ಡಿಸಿಪಿ ಮೇಡಂ ಮಾತನಾಡುತ್ತಿರುವುದಾಗಿ ಹೇಳಿದ್ದಾನೆ.
ನರೇಶ್ ಗೊಯಿಲ್ ಎನ್ನುವ ವ್ಯಕ್ತಿ ಹಣ ವರ್ಗಾವಣೆ ಮಾಡುತ್ತಿದ್ದಾನೆ. ಆ ಪ್ರಕರಣದಲ್ಲಿ  ನೀವು ಕೂಡ ಇದ್ದಿರಾ. ಕೆನರಾ ಬ್ಯಾಂಕ್ ಮುಂಬೈಯಲ್ಲಿ ನಿಮ್ಮ ಆಕೌಂಟ್ ಇದೆ. ಇದರ ಎಟಿಎಂ ಕಾರ್ಡ್ ನರೇಶ ಗೋಯಿಲ್ ಹತ್ತಿರ ಸಿಕ್ಕಿದೆ.  ಪ್ರತಿ ತಿಂಗಳು 20 ಲಕ್ಷ ರೂ. ನಿಮ್ಮ ಖಾತೆಗೆ ಬರುತ್ತಿದೆ.  ನಿಮ್ಮ ಖಾತೆಯಲ್ಲಿರುವ ಹಣ ಅಧಿಕೃತ ಅಥವಾ ಅನಧಿಕೃತ ಎಂದು ಪರಿಶೀಲನೆ ಮಾಡಬೇಕು. ನಾವು ಕಳುಹಿಸಿದ  ಎರಡು ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿ ಎಂದು ಹೇಳಿ ನನ್ನ ಖಾತೆಯಿಂದ  22,40,000 ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ  ಮಾಡಿದ್ದಾರೆ ಎಂದು ಶಿಕ್ಷಕಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

Read also : ಸಂವಿಧಾನದ ಮೂಲಕ್ಕೆ ಧಕ್ಕೆಯಾದರೆ ಶೋಷಿತರಿಗೆ ಅಪಾಯ : ವಕೀಲ ಅನೀಸ್ ಪಾಷಾ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿ  ಪರಮೇಶ್ವರ ಹೆಗಡೆ ಮಾರ್ಗದರ್ಶನದಲ್ಲಿ ಸಿಇಎನ್ ಠಾಣೆಯ ಡಿಎಸ್ಪಿ  ಬಂಕಾಳಿ ನಾಗಪ್ಪ ನೇತೃತ್ವದಲ್ಲಿ  ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ  ತಂಡವು  ಪ್ರಕರಣ ಭೇದಿಸಿ ಎ-3 ಆರೋಪಿ ಅರುಣ್ ಕುಮಾರ್ (35) ಬಂಧಿಸಿ  ಆತನಿಂದ 1.90 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ಈ ಪ್ರಕರಣಕ್ಕೆ ಇನ್ನು ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು,ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಡಿವೈಎಸ್ಪಿ ಬಂಕಾಳಿ ನಾಗಪ್ಪ ಹಾಗೂ  ಸಿಬ್ಬಂದಿ ಯವರಾದ  ಅಶೋಕ , ಮುತ್ತುರಾಜ್, ಯೋಗೀಶ್ ನಾಯ್ಕ್, ನಿಜಲಿಂಗಪ್ಪ ಅವರನ್ನು ಎಸ್ಪಿ  ಉಮಾ ಪ್ರಶಾಂತ್ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂವಿಧಾನದ ಮೂಲಕ್ಕೆ ಧಕ್ಕೆಯಾದರೆ ಶೋಷಿತರಿಗೆ ಅಪಾಯ : ವಕೀಲ ಅನೀಸ್ ಪಾಷಾ
Next Article Davanagere ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತ್ಯಾಗ, ಬಲಿದಾನಗಳು ನಮ್ಮ ಜೀವನಕ್ಕೆ ಮಾದರಿ

ಹರಿಹರ: ಭಗವಾನ್ ಯೇಸು ಕ್ರಿಸ್ತನ ಸ್ಮರಣೆಯ ಶುಭ ಶುಕ್ರವಾರದ ಆಚರಣೆಯನ್ನು ನಗರದ ಆರೋಗ್ಯಮಾತೆ ಬಸಿಲಿಕ ಪುಣ್ಯಕ್ಷೇತ್ರ ಚರ್ಚ್‌ನಲ್ಲಿ ಭಕ್ತಿ ಹಾಗೂ…

By Dinamaana Kannada News

ದಾವಣಗೆರೆ |ಗಾಂಧಿ ಜಯಂತಿ : ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025 ರ ಅ.2 ರಂದು ಆಚರಿಸುವ ಮಹಾತ್ಮ ಗಾಂಧೀಜಿಯವರ 156…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 49 :  ಅದಿರು ಅಗೆದವರ ಬೆವರು

Kannada News | Sanduru Stories | Dinamaana.com | 09-06-2024 ಹಸಿವು ಮನುಷ್ಯನನ್ನಷ್ಟೇ ಕೊಲ್ಲುವಂತಿದ್ದರೆ (Sanduru Stories) ಹಸಿವು…

By Dinamaana Kannada News

You Might Also Like

Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
N F Kittur. Teacher. Belgaum
ಅಭಿಪ್ರಾಯ

ಸ್ತ್ರೀಯರ ಸಾಧನೆ : ಎನ್ ಎಫ್ ಕಿತ್ತೂರ್

By Dinamaana Kannada News
Davanagere
ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?