Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ
ತಾಜಾ ಸುದ್ದಿ

ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

Dinamaana Kannada News
Last updated: May 12, 2025 1:01 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು ಶೀಘ್ರವೇ ನಿವಾರಿಸಿ, ಸಮೀಕ್ಷೆಯ ಅವಧಿ ವಿಸ್ತರಿಸಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರಿಗೆ ಮನವಿ ಮಾಡಿದ್ದಾರೆ.
ಒಳಮೀಸಲಾತಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂಬ ಸರ್ಕಾರದ ಕಾಳಜಿ ಮತ್ತು ಬದ್ಧತೆ ಸ್ವಾಗತಾರ್ಹ. ಆದರೆ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಗಳಿಗೆ ಕೇವಲ ೩ ಗಂಟೆ ತರಬೇತಿ ನೀಡಲಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಗಾಗಿ ರೂಪಿಸಿರುವ ಆ್ಯಂಡ್ರಾಯ್ಡ್ ಅಪ್ಲಿಕೇಷನ್‌ನಲ್ಲಿ ಕೆಲ ಸಮಸ್ಯೆಗಳಿವೆ. ಹಳೆಯ ಆ್ಯಂಡ್ರಾಯ್ಡ್ ಫೋನ್‌ಗಳಲ್ಲಿ ಈ ಅಪ್ಲಿಕೇಷನ್ ಡೌನ್‌ಲೋಡ್ ಆಗುವುದಿಲ್ಲ. ಡೌನ್‌ಲೋಡ್ ಆದರೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳು ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆಲವು ಹಳ್ಳಿಗಳಲ್ಲಿ ಕೇಳಿ ಬಂದಿವೆ.
ಅಲ್ಲದೇ ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನೀವು ಪರಿಶಿಷ್ಟ ಜಾತಿಗೆ ಸೇರಿದವರೆ  ಎಂದು ಕೇಳಿ, ಪರಿಶಿಷ್ಟ ಜಾತಿಗೆ ಸೇರಿದ್ದರೆ ಅವರ ಮಾಹಿತಿ ಕಲೆ ಹಾಕಬೇಕು. ಕೆಲವು ಗಣತಿದಾರರು ಪ್ರಾಮಾಣಿಕವಾಗಿ ತಮಗೆ ವಹಿಸಿದ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವು ಗಣತಿದಾರರು ಒಳಮೀಸಲಾತಿ ಸಮೀಕ್ಷೆ ಎನ್ನುವ ಬದಲು ಜಾತಿಗಣತಿ ಎಂದು ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಆಗುತ್ತಿದೆ ಎಂಬ ದೂರುಗಳು ಬರುತ್ತಿವೆ.  ಇದನ್ನು ಸರಿಪಡಿಸಬೇಕು.
ಗ್ರಾಮೀಣ ಪ್ರದೇಶಗಳಲ್ಲಿರುವ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಅನಕ್ಷರಸ್ಥರು ಬಹಳ ಮಂದಿ ಇದ್ದಾರೆ. ಅವರಿಗೆ ಒಳಮೀಸಲಾತಿ ಸಮೀಕ್ಷೆ ಬಗ್ಗೆ ತಿಳಿದಿರುವುದಿಲ್ಲ.
Read also : Davanagere | ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಡಿ.ಇ.ಎಲ್.ಇಡಿ.  ದಾಖಲಾತಿಗೆ ಅರ್ಜಿ ಆಹ್ವಾನ
ಒಳಮೀಸಲಾತಿ ಸಮೀಕ್ಷೆ ಬಗ್ಗೆ ತಿಳಿ ಹೇಳಿ ಗಣತಿದಾರರು ಅವರಿಂದ ಮಾಹಿತಿ ಸಂಗ್ರಹಿಸಬೇಕು. ಆಯಾ ಸಮಾಜದ ಮುಖಂಡರು ಗಣತಿದಾರರೊಂದಿಗೆ ತೆರಳಿ ಅವರ ಕುಟುಂಬದ ಸಂಪೂರ್ಣ ಮಾಹಿತಿ ನೀಡುವ ಕೆಲಸ ಮಾಡಬೇಕು. ಗಣತಿದಾರರು ಕೂಡ ಯಾವುದೇ ತಪ್ಪು ಮಾಹಿತಿ ಸಂಗ್ರಹಿಸದೆ ನಿಖರ ಮಾಹಿತಿ ಸಂಗ್ರಹಿಸಲು ಹೆಚ್ಚಿನ ಗಮನ ಹರಿಸಬೇಕೆಂದು ಸಲಹೆ ನೀಡಿದ್ದಾರೆ.
ಪಡಿತರ ಚೀಟಿಯಲ್ಲಿ (ಕುಟುಂಬ ಡೇಟಾಬೇಸ್) ಹೆಸರು ಇಲ್ಲದಿದ್ದರೆ ಪ್ರತಿ ಕುಟುಂಬದಲ್ಲಿ ಹೆಚ್ಚುವರಿಯಾಗಿ ಇಬ್ಬರನ್ನಷ್ಟೇ ಸೇರಿಸಲು ಅವಕಾಶವಿದೆ. ಬಹಳಷ್ಟು ಕುಟುಂಬಗಳಲ್ಲಿ ಸಣ್ಣ ಮಕ್ಕಳನ್ನು ಇನ್ನೂ ಪಡಿತರ ಚೀಟಿಗೆ ಸೇರಿಸಿಲ್ಲ. ಹೊಸದಾಗಿ ಮದುವೆಯಾಗಿ ಬಂದ ಹೆಣ್ಣು ಮಕ್ಕಳ ಹೆಸರೂ ಚೀಟಿಯಲ್ಲಿ ಇಲ್ಲ. ಅಂತಹವರ ಹೆಸರು ಮತ್ತು ವಿವರಗಳನ್ನು ಸಮೀಕ್ಷೆಯಲ್ಲಿ ಕಲೆ ಹಾಕಲು ಆಗುತ್ತಿಲ್ಲ. ಇದು ಗಂಭೀರವಾದ ಸಮಸ್ಯೆ ಆಗಿದ್ದು, ತಕ್ಷಣವೇ ಇದನ್ನು ಸರಿಪಡಿಸಬೇಕು.
ಅಲ್ಲದೇ ಮೇ.5 ರಿಂದ ಮೇ.17  ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಈ ಸಮಸ್ಯೆಗಳು ಉದ್ಭವಿಸಿರುವುದರಿಂದ ಸಮೀಕ್ಷೆಯಿಂದ ಎಷ್ಟೋ ಕುಟುಂಬಗಳು ಹೊರ ಉಳಿಯುತ್ತವೆ. ಹೀಗಾಗಿ ಸಮೀಕ್ಷೆ ಅವಧಿ ವಿಸ್ತರಣೆ ಮಾಡಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಕೋರಿದ್ದಾರೆ.
TAGGED:Dinamana.comInternal reservationKannada Newsಒಳಮೀಸಲಾತಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಡಿ.ಇ.ಎಲ್.ಇಡಿ.  ದಾಖಲಾತಿಗೆ ಅರ್ಜಿ ಆಹ್ವಾನ
Next Article goutama budha kannada article dr vishwanath Gautama Buddha | ‘ಮನುಕುಲದ ಬೆಳಕು ತಥಾಗತ ಬುದ್ಧ’

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.15  :  ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು…

By Dinamaana Kannada News

Davanagere | ಅರಿವು ನವೀಕರಣ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ ಆ.27 (Davangere District)  :  ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ, ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್,…

By Dinamaana Kannada News

ತಪೋವನದಲ್ಲಿ ಯೋಗ ದಿನಾಚರಣೆ

ದಾವಣಗೆರೆ : ತಪೋವನ ಸಮೂಹ ಸಂಸ್ಥೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಚಾರಣೆ ಆಚರಣೆ ಮಾಡಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಡಾ. ಶಶಿಕುಮಾರ್…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?