Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರೋಗ್ಯದ ಸುಯೋಗವು ಬ್ರಾಹ್ಮೀ ಮುಹೂರ್ತದಲ್ಲಿದೆ : ಹಿರಿಯ ಯೋಗಗುರು ಡಾ|| ರಾಘವೇಂದ್ರ ಗುರೂಜಿ
ತಾಜಾ ಸುದ್ದಿ

ಆರೋಗ್ಯದ ಸುಯೋಗವು ಬ್ರಾಹ್ಮೀ ಮುಹೂರ್ತದಲ್ಲಿದೆ : ಹಿರಿಯ ಯೋಗಗುರು ಡಾ|| ರಾಘವೇಂದ್ರ ಗುರೂಜಿ

Dinamaana Kannada News
Last updated: July 7, 2025 5:31 am
Dinamaana Kannada News
Share
Yoga Guru Dr. Raghavendra Guruji Davanagere
SHARE

ಮಂಗಳೂರು/ದಾವಣಗೆರೆ  :  ಪ್ರತಿದಿನ ಪ್ರಾತಃಕಾಲ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಯಾರು ತಮ್ಮ ದಿನನಿತ್ಯದ ಆರೋಗ್ಯದ ಸಾಧನೆಯೊಂದಿಗೆ ಪ್ರಾರಂಭಿಸುತ್ತಾರೋ ಅವರುಗಳಿಗೆ ಖಾಯಿಲೆಗಳು ಹತ್ತಿರ ಸುಳಿಯುವುದಿಲ್ಲ. ಬದಲಾಗಿ ಆರೋಗ್ಯದ ಸುಯೋಗವು ಪ್ರಾಪ್ತವಾಗುತ್ತದೆ ಎಂದು ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದ ಸಂಸ್ಥಾಪಕರು, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಹಿರಿಯ ಯೋಗ ತಜ್ಞರೂ ಆದ ಡಾ|| ರಾಘವೇಂದ್ರ ಗುರೂಜಿಯವರು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಮಂಗಳೂರಿನ ರಾಧಾಕೃಷ್ಣ ದೇವಸ್ಥಾನದ ಬಾಳಂಭಟ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಿ.ಎಸ್.ಎಸ್. ಸಮಾಜ ಸುಧಾರಕ ಸಂಘ (ರಿ) ಮಂಗಳೂರು ಇವರ 52ನೇ ವಾರ್ಷಿಕ ಮಹಾಸಭೆ, ಸಾಮೂಹಿಕ ಬ್ರಹ್ಮೋಪದೇಶ, ಶ್ರೀ ಸತ್ಯನಾರಾಯಣ ಪೂಜೆ, ಸರ್ವ ಸಮಾಜದ ಹಿರಿಯರಿಗೆ ಹಾಗೂ ಪ್ರತಿಭಾನ್ವಿತರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ ಸುಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ದೈನಂದಿನ ದಿನಚರಿಯಲ್ಲಿ ಆರೋಗ್ಯದ ಅವಶ್ಯಕತೆ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿ ಮಾತನಾಡಿದರು.

ನಾವು ಎಲ್ಲಾ ವಿಷಯಕ್ಕೂ ಮುಹೂರ್ತವನ್ನು ನೋಡಿ ಮುಂದುವರೆಯುತ್ತೇವೆ. ಆದರೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾವ ಮುಹೂರ್ತವನ್ನು ನೋಡುವುದಿಲ್ಲ. ಇದು ನಮ್ಮೆಲ್ಲರ ದೌರ್ಬಲ್ಯವಾಗಿದೆ. ಒಳ್ಳೆಯ ಆರೋಗ್ಯ, ಸದಾ ಚಟುವಟಿಕೆಯಿಂದಿರಲು ಸರ್ವಶ್ರೇಷ್ಠವಾದ ಮುಹೂರ್ತ ಬ್ರಾಹ್ಮೀ ಮುಹೂರ್ತವಾಗಿದೆ ಅಂದರೆ ಬೆಳಿಗ್ಗೆ 3-30 ರಿಂದ 4-30 ರ ಒಳಗೆ ಹಾಸಿಗೆಯಿಂದ ಎದ್ದು ಶುಚಿರ್ಭೂತರಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಒಂದಿಷ್ಟು ಶಾರೀರಿಕ, ಮಾನಸಿಕ ವ್ಯಾಯಾಮವನ್ನು ಮಾಡಿ ದೈನಂದಿನ ಕೆಲಸಗಳನ್ನು ಪ್ರಾರಂಭಿಸಬೇಕು ಎಂದು ತಿಳಿಸುತ್ತಾ ನಮ್ಮ ಹೊಟ್ಟೆಯ ಆರೋಗ್ಯ, ಮನಸ್ಸಿನ ಆರೋಗ್ಯ, ಉಸಿರಾಟಕ್ಕೂ ಆರೋಗ್ಯಕ್ಕೂ ಇರುವ ಸಾಮ್ಯತೆ ಹೀಗೆ ಹತ್ತು ಹಲವು ವಿಷಯಗಳನ್ನು ಡಾ|| ರಾಘವೇಂದ್ರ ಗುರೂಜಿಯವರು ತಿಳಿಸಿಕೊಟ್ಟರು.

Read also : Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?

ಇದೇ ಸಂದರ್ಭದಲ್ಲಿ ಡಾ|| ಗುರೂಜಿಯವರನ್ನು ಆತ್ಮೀಯವಾಗಿ ಗೌರವಿಸಿ ಜೀವಮಾನ ಸಾಧನೆಯನ್ನೊಳಗೊಂಡ ಸುಂದರವಾದ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಫಲಪುಷ್ಪ ತಾಂಬೂಲದೊಂದಿಗೆ ಗೌರವಾರ್ಪಣೆ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಗಣೇಶ್ ನಾಯಕ್ ಕದ್ರಿ, ವಸಂತ್ ನಾಯಕ್ ಗುಡ್ಡೇಕೇರಿ ಇವರನ್ನು ಸಹ ಸನ್ಮಾನಿಸಲಾಯಿತು.

ಅಧ್ಯಕ್ಷತೆ ಸುದೇಶ್‍ಕುಮಾರ್ ಬೋಳಾರ, ಪ್ರಧಾನ ಕಾರ್ಯದರ್ಶಿ  ಎಂ. ಮುರಳಿ ಮನೋಹರ ನಾಯಕ್ ಜೆಪ್ಪು, ಕಾರ್ಯದರ್ಶಿ ಅವಿನಾಶ್ ನಾಯಕ್, ಸುಧೀರ್ ನಾಯಕ್ ಜೆಪ್ಪು, ಕೋಶಾಧಿಕಾರಿ  ಗೌತಮ್‍ರಾವ್, ಉಪಾಧ್ಯಕ್ಷ  ಪ್ರೀತಮ್ ನಾಯಕ್ ಹಾಗೂ ಹರಿಣಿಶಾಮ್ ನಾಯಕ್, ಸರ್ವ ಸಮಾಜ ಬಾಂಧವರೂ ಹಾಗೂ ಸರ್ವ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು?
Next Article Davanagere rain report ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಈ ವಾರ ಭಾರೀ ಮಳೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

ಮೈಸೂರು ಆ 28: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ…

By Dinamaana Kannada News

ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ

ದಾವಣಗೆರೆ,ಮಾ.14 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳನ್ನು ತಿಳಿಸಿಕೊಡುವುದರೊಂದಿಗೆ ಇತಿಹಾಸ, ಸಾಹಿತ್ಯಾತ್ಮಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕವುಳ್ಳ ಗ್ರಂಥಾಲಯವನ್ನು…

By Dinamaana Kannada News

ಪ್ರಜ್ಞೆಯ ಹಸಿವನ್ನು ಪ್ರತಿನಿಧಿಸಿದ ಅನಿಲ್ ಹೊಸಮನಿಯುವರ ಕಾರ್ಯಕ್ರಮ

Make sure when leaving the world, Not just you were good, but leave  A good…

By Dinamaana Kannada News ಬಿ.ಶ್ರೀನಿವಾಸ

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?