Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾನವನಷ್ಟೇ ಪರಿಸರವೂ ಪ್ಲಾಸ್ಟಿಕ್‌ನಿಂದ ಉಸಿರುಗಟ್ಟಿದೆ:ಜಿ.ಎಂ.ಗಂಗಾಧರಸ್ವಾಮಿ
ತಾಜಾ ಸುದ್ದಿ

ಮಾನವನಷ್ಟೇ ಪರಿಸರವೂ ಪ್ಲಾಸ್ಟಿಕ್‌ನಿಂದ ಉಸಿರುಗಟ್ಟಿದೆ:ಜಿ.ಎಂ.ಗಂಗಾಧರಸ್ವಾಮಿ

Dinamaana Kannada News
Last updated: November 26, 2025 4:40 am
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ :  ಮಾನವ ಎಷ್ಟು ಸೂಕ್ಷ್ಮತೆಯೋ ಅದೇ ರೀತಿ ಪರಿಸರವೂ ಕೂಡ ಅಷ್ಟೇ ಸೂಕ್ಷ್ಮತೆಯನ್ನು ಹೊಂದಿದೆ. ಮಾನವನಿಗೆ ಉಸಿರಾಟ ತೊಂದರೆಯಾದಾಗ ಸಾವು ಸಂಭವಿಸುತ್ತದೆ. ಈಗಾಗಲೇ ಪ್ಲಾಸ್ಟಿಕ್ ಹೆಚ್ಚಳದ ಮೂಲಕ ಉಸಿರುಗಟ್ಟುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು.

ನಗರದ ನಿಟುವಳ್ಳಿ ರಾಷ್ಟ್ರೋತ್ಥಾನ ಶಾಲಾ ಆವರಣದಲ್ಲಿ  ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವರ್ಗದವರಿಗೆ ಜಾಗೃತಿ ಮೂಡಿಸುವ ವಿಶೇಷ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಅದನ್ನು ವೈಜ್ಞಾನಿಕ, ಸಮರ್ಪಕವಾದ ರೀತಿಯಲ್ಲಿ ನಿರ್ವಹಣೆ ಮಾಡಿದಲ್ಲಿ ಪರಿಸರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆಯುಂಟುಗುವುದಿಲ್ಲ. ಆದರೆ ಕೆಲವರು ಇದೆಲ್ಲ ಗೊತ್ತಿದ್ದು ಸಹ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ಜಿಲ್ಲೆಯ ಹೃದಯ ಭಾಗದಲ್ಲಿಯೇ ಸುಮಾರು 1 ಲಕ್ಷ ಗಿಳಿ, 10 ರಿಂದ 15 ಸಾವಿರ ಬಾವಲಿಗಳು ಅವಸ್ಥಾನವಾಗಿವೆ. ಆದರೆ ಪರಿಸರ ಮಾಲಿನ್ಯ, ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಿಂದ ಅವುಗಳ ಸಂತತಿ ಕ್ಷೀಣಿಸುತ್ತಿದೆ. ದೇಶವು ನೈಸರ್ಗಿಕವಾಗಿ ಸಮೃದ್ಧವಾಗಿ ಇರಬೇಕಾದರೆ ಶೇಕಡಾ 33ರಷ್ಟು ಅರಣ್ಯ ಹೊಂದಿರಬೇಕು. ಪ್ರಸ್ತುತ ಅರಣ್ಯ ಪ್ರದೇಶ ಕಡಿಮೆ ಇದೆ. ಸಮುದ್ರದಲ್ಲಿ ಶೇಕಡಾ 70ರಷ್ಟು ಅರಣ್ಯ ಹೊಂದಿದ್ದು, ಹೆಚ್ಚು ಆಮ್ಲಜನಕ ಹೊರಸೂಸುತ್ತದೆ. ಪ್ಲಾಸ್ಟಿಕ್‌ನ್ನು ಎಲ್ಲೆಂದರಲ್ಲಿ ಬಳಸಿ ಬಿಸಾಡುವುದರಿಂದ ನದಿ ಮೂಲಗಳಿಂದ ಸಮುದ್ರ ಸೇರುತ್ತಿದೆ. ಇದರಿಂದ ಜಲ ಮೂಲ ಕಲುಷಿತಗೊಳ್ಳುವುದಲ್ಲದೇ ಜಲಚರ ಪ್ರಾಣಿಗಳ ಜೀವಕ್ಕೂ ಕುತ್ತು ತರುತ್ತಿದೆ ಎಂದರು.

Read also : ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಹೊಂದಿದ್ದು, ಸ್ವಚ್ಚತೆಗಾಗಿ ಕೇವಲ 300 ಜನ ಪೌರಕಾರ್ಮಿಕರಿದ್ದಾರೆ. ಅವರಿಂದ ನಗರವನ್ನು ಸ್ವಚ್ಚಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಬಳಸಿ ಬಿಸಾಡುವ ಎಲ್ಲಾ ರೀತಿಯ ಪ್ಲಾಸ್ಟಿಕ್ ಮತ್ತು ಇನ್ನಿತರೆ ತ್ಯಾಜ್ಯವನ್ನು ಹಸಿಕಸ ಮತ್ತು ಒಣಕಸ ರೀತಿಯಲ್ಲಿ ವೈಜ್ಞಾನಿಕವಾಗಿ ವಿಂಗಡಿಸಿ ಸ್ಥಳೀಯ ಸಂಸ್ಥೆಗಳಿಗೆ ಅಥವಾ ಶಾಲೆಗಳಿಗೆ ನೀಡಬೇಕೆಂದು ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿದರು.

ಪರಿಸರ ಉಳಿಯಬೇಕಾದರೆ, ಈ ರೀತಿಯ ಉತ್ತಮ ಅಂಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡಲ್ಲಿ ಉತ್ತಮ ಸಮಾಜ ನಿರ್ಮಾಣ ಖಂಡಿತಾ ಸಾಧ್ಯ. ಇದಕ್ಕೆ ತಮ್ಮ ಸಹಕಾರ ಅತ್ಯಗತ್ಯ ಎಂದರು.

ಈ ವೇಳೆ ಡಿಡಿಪಿಐ ಕೊಟ್ರೇಶ್, ಸಿಆರ್‌ಪಿ ತೀರ್ಥಾಚಾರ್ಯ, ರಾಷ್ಟ್ರೋತ್ಥಾನ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಯಣ್ಣ, ಪ್ರಾಂಶುಪಾಲರಾದ ಸುಗುಣ ಸೇರಿದಂತೆ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಅರ್ಜಿ ಆಹ್ವಾನ
Next Article Davanagere ಶಿಕ್ಷಣದ ಜತೆಗೆ ಶಿಸ್ತು, ಸಂಯಮ, ಸುಸಂಸ್ಕಾರ ಮೈಗೂಡಿಸಿಕೊಳ್ಳಿ : ಬಾಲನ್ಯಾಯ ಮಂಡಳಿ ಅಧ್ಯಕ್ಷ ಸಿ.ನಾಗೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ

ಹರಿಹರ (Harihara) : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಂನಲ್ಲಿ ಉಗ್ರರ ದಾಳಿ ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಹರಿಹರ ತಾಲ್ಲೂಕು…

By Dinamaana Kannada News

Davanagere | ನಮ್ಮನ್ನು ನಾವು ಹೊಸ ವೇಗಕ್ಕೆ, ಹೊಸ ಸ್ವರೂಪಕ್ಕೆ update ಮಾಡಿಕೊಳ್ಳಬೇಕಿದೆ: ಕೆವಿಪಿ

ದಾವಣಗೆರೆ ಸೆ13 (Davanagere ): ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ. ಕಾಲಕ್ಕೆ ತಕ್ಕ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ…

By Dinamaana Kannada News

ಕಾಮಗಾರಿ ಪೂರ್ಣಗೊಳಿಸಲು ಶಾಸಕ ಬಸವಂತಪ್ಪ ತಾಕೀತು

ದಾವಣಗೆರೆ:  ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕೆಂದು ಸಂಬಂಧಪಟ್ಟ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?