ದಾವಣಗೆರೆ (Davanagere): ಮುಖ್ಯಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಮಾಡಿದ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಬಿ.ಜೆ.ಪಿ ಮುಖಂಡರು ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಆಲೂರು ನಿಂಗರಾಜು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ಕೂಡಲೇ ಮುಖ್ಯ ಶಿಕ್ಷಕರಾದ ವೀರಣ್ಣ. ಅವರ ಅಮಾನತ್ತು ಆದೇಶವನ್ನು ರದ್ದುಪಡಿಸಬೇಕು ಹಾಗೂ ಆ ಶಾಲೆಯ ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡಬೇಕು’ ಎಂದೂ ಆಗ್ರಹಿಸಿದ್ದಾರೆ.
ಮುಖ್ಯ ಶಿಕ್ಷಕ ವೀರಣ್ಣ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ ನಡೆಸಿದ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವೀರಣ್ಣನವರ ಮೇಲೆ `ಗುಬ್ಬಿ ಮೇಲೆ ಬ್ರಹ್ಮಾಸ್ತ್ರ!’ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಸರ್ಕಾರ ಒಂದು ಕಡೆ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಮತ್ತೊಂದು ಕಡೆ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಶಾಲಾ ಮಕ್ಕಳಿಗೆ ಕೊಠಡಿಗಳನ್ನು ಕೊಡಿ ಎಂದು ಆಗ್ರಹಿಸಿದ್ದಕ್ಕೆ ಮುಖ್ಯ ಶಿಕ್ಷಕರಿಗೆ ಅಮಾನತು ಶಿಕ್ಷೆ ವಿಧಿಸಿರುವ `ಹಿಟ್ಲರ್ ಸರ್ಕಾರ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.
Read also : ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….
ಶಾಲೆಗೆ ಕೊಠಡಿ ಕೇಳುವುದು ಮಹಾಪರಾಧವೇ ಸಚಿವ ಮಧು ಬಂಗಾರಪ್ಪ ಅವರೇ? ಶಿಕ್ಷಣ ಸಚಿವರಾಗಿ ನಿಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿದ್ದರೆ ಅ ಮುಖ್ಯ ಶಿಕ್ಷಕ ಶಾಲಾ ಮಕ್ಕಳಿಗಾಗಿ ಕಾಲ್ನಡಿಗೆ ಜಾಥಾ ಏಕೆ ಮಾಡುತ್ತಿದ್ದರು ಎಂದು ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.