Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ರಾಜ್ಯ ಸರ್ಕಾರ ಕೂಡಲೇ ಒಳಮೀಸಲು ಜಾರಿಗೊಳಿಸಲಿ
ತಾಜಾ ಸುದ್ದಿ

ದಾವಣಗೆರೆ : ರಾಜ್ಯ ಸರ್ಕಾರ ಕೂಡಲೇ ಒಳಮೀಸಲು ಜಾರಿಗೊಳಿಸಲಿ

Dinamaana Kannada News
Last updated: August 14, 2025 5:25 pm
Dinamaana Kannada News
Share
Davanagere
SHARE

ದಾವಣಗೆರೆ : ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಕಳೆದ ಮೂರು ದಶಕಗಳ ಕಾಲ ಹೋರಾಟ ನಡೆಸಿಕೊಂಡು ಬರಲಾಗಿದೆ. ಈಗ ಕಾಲ ಪಕ್ವವಾಗಿದೆ. ಕೂಡಲೇ ರಾಜ್ಯ ಸರಕಾರ ಯಾವುದೇ ಗೊಂದಲಗಳಿಗೆ ಅಸ್ಪದ ನೀಡದೆ ಒಳಮೀಸಲು ಜಾರಿ ಮಾಡಬೇಕು ಎಂದು ದಲಿತ ಪರ ವಿವಿಧ ಸಂಘಟನೆಗಳ ಮಹಾ ಒಕ್ಕೂಟದ ಕುಂದವಾಡ ಮಂಜುನಾಥ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಯೋಚನೆಯಲ್ಲಿ ಜಾರಿ ಮಾಡಬೇಕು. ತಳ ಸಮುದಾಯಗಳ ತಾಳ್ಮೆ ಪರೀಕ್ಷಿಸಬೇಡಿ ಎಂದು ಅವರು, ಅವಕಾಶ ವಂಚಿತ ಸಮುದಾಯಗಳು ಮತ್ತೊಂದು ಐತಿಹಾಸಿಕ ಹೋರಾಟಕ್ಕೆ ಮುಂದಾಗದಂತೆ ತಡೆಯುವ ಎಲ್ಲಾ ಅವಕಾಶಗಳು ನಿಮ್ಮ ಕೈಯಲ್ಲಿದೆ. ಒಳ ಮೀಸಲಾತಿ ಕೇವಲ ಒಂದು ಜಾತಿಗೆ ಸೀಮಿತವಾಗದೇ 101 ಜಾತಿಗಳು ಹಂಚಿ ತಿನ್ನುವ ಹೋರಾಟವೆಂಬುದು ರುಜುವಾತಾಗಿದೆ. ಒಳಮೀಸಲಾತಿಯನ್ನು ನಮ್ಮ ಸಂವಿಧಾನಾತ್ಮಕ ಸಂಘರ್ಷ ಹಾಗೂ ಹೋರಾಟದ ಭಾಗವಾಗಿ ಆಯ್ಕೆ ಮಾಡಿಕೊಂಡ ಕಾರಣದಿಂದ ದೈಹಿಕ ಮತ್ತು ಮಾನಸಿಕ ವಯೋಮಾನವನ್ನಷ್ಟೆ ಅಲ್ಲ ನಮ್ಮ ಸಮಾಜದ ಎರಡು ತಲೆಮಾರುಗಳ ಯುವಜನತೆಯ ವಿದ್ಯೆ, ಉದ್ಯೋಗ ಹಾಗೂ ಔದ್ಯೋಗಿಕ ಅವಕಾಶಗಳು ಸೇರಿದಂತೆ ರಾಜಕೀಯ ಸ್ಥಾನಮಾನಗಳನ್ನು ಕಳೆದುಕೊಂಡಿದ್ದೇವೆ. ಈ ತರಹದ ನಷ್ಟಗಳಿಗೆ ಆಡಳಿತರೂಢ ಎಲ್ಲಾ ಪಕ್ಷಗಳ ನಿರ್ಲಕ್ಷ್ಯವೇ ಕಾರಣ ಎಂದರು.

ಸವೋಚ್ಛ ನ್ಯಾಯಾಲಯದ ತೀರ್ಪು ಪ್ರಕಟವಾಗಿ ಒಂದು ವರ್ಷ ಕಳೆದಿದೆ. ನ್ಯಾಯಾಲಯದ ನಿರ್ದೇಶನದಂತೆ ತಾವೇ ನೇಮಿಸಿದ ನಿವೃತ್ತ ನ್ಯಾ. ನಾಗಮೋಹನ್‌ದಾಸ್ ರವರ ಏಕ ಸದಸ್ಯ ಆಯೋಗವು ಸಂಗ್ರಹಿಸಿರುವ ವೈಜ್ಞಾನಿಕ, ವಸ್ತುನಿಷ್ಠ ದತ್ತಾಂಶಗಳ ಅಧ್ಯಯನದ ಗಡುವು ಜುಲೈ-31 ಕ್ಕೆ ಅಂತ್ಯವಾಗಿದೆ. ಆಗಸ್ಟ್ 11, 2025 ರಿಂದ ತಮ್ಮ ಸರ್ಕಾರದ ಮಳೆಗಾಲದ ಅಧಿವೇಶನ ಆರಂಭವಾಗಿದೆ. ಸದರಿ ಅಧಿವೇಶನದಲ್ಲಿಯೇ ಒಳಮೀಸಲಾತಿ ವಿಚಾರವು ಸರ್ವಪಕ್ಷಗಳ ಸರ್ವಾನುಮತದೊಂದಿಗೆ ಅನುಮೋದನೆಯಾಗಿ ರಾಜ್ಯಪಾಲರ ಅಂಕಿತವಾಗಬೇಕು. ಇದರ ಬದಲಿಗೆ ಹಿತಶತ್ರುಗಳ ಒತ್ತಡಕ್ಕೆ ಮಣಿಯುವುದು ಅಥವಾ ಪ್ರಸಂಗಗಳು ನಡೆದರೆ ಅದನ್ನು ತಜ್ಞರ ಸಲಹೆಯ ನೆಪದಲ್ಲಿ ಮತ್ತೊಂದು ಉಪ ಸಂಪುಟ ಸಮಿತಿ ರಚನೆಯ ನೆಪವೊಡ್ಡಿ ತಿಂಗಳುಗಳ ಕಾಲ ಮುಂದುವರೆಯುವ ಸಹಿಸಲಾಗುವುದಿಲ್ಲ. ಮತ್ತೊಂದು ಸುತ್ತಿನ ಸಂಘರ್ಷಕ್ಕೆ ಮುಂದಾಗುತ್ತೇವೆ ಎಂಬ ಎಚ್ಚರಿಕೆ ನೀಡಿದರು.

Read also : ದಾವಣಗೆರೆ : ಷೇರುದಾರರ ಮಕ್ಕಳಿಗೆ ಪ್ರತಿಭಾಪುರಸ್ಕಾರಕ್ಕೆ ಆಹ್ವಾನ

ಎಲ್ಲಾ ಅಡ್ಡಿ ಆತಂಕಗಳನ್ನು ನಿವಾರಿಸಿ ಒಳಮೀಸಲಾತಿ ಜಾರಿ ತೀರ್ಮಾನ ಘೋಷಿಸಬೇಕು. ಇಲ್ಲವೆಂದರೆ ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಸಚಿವ ಸಂಪುಟದ ಯಾವುದೇ ಸಚಿವರು ಕಾರ್ಯಕ್ರಮಗಳ ನಿಮಿತ್ತ ದಾವಣಗೆರೆಗೆ ಆಗಮಿಸಿದಾಗ ಕಪ್ಪು ಬಾವುಟವನ್ನು ಪ್ರದರ್ಶಿಸಿ ಫೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಲಿಂಗರಾಜು ಗಾಂಧಿನಗರ, ಸದಾನಂದ ಚಿಕ್ಕನಹಳ್ಳಿ.ನಿಂಗಪ್ಪ ಹೆಚ್..ತಿಪ್ಪೇರುದ್ರಪ್ಪ, ಅನಿಲ್ ಕುಮಾರ್. ಹನುಮಂತಪ್ಪ. ಬಿ.ಎನ್.ನಾಗೇಶ್ ಚಿತ್ತಾನಹಳ್ಳಿ, ನಾಗರಾಜ್, ನಾಗೇಶ್. ಗಣೆಶ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ : ಷೇರುದಾರರ ಮಕ್ಕಳಿಗೆ ಪ್ರತಿಭಾಪುರಸ್ಕಾರಕ್ಕೆ ಆಹ್ವಾನ
Next Article K.P. Suresh ಆಗಸ್ಟ್‌ 15ರ ದುಗುಡ : ಬರಹ ಕೆ.ಪಿ.ಸುರೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

ದಾವಣಗೆರೆ (Davanagere) : ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆ ಆಯಿತು ಎಂಬುದು ಸರಿಯಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ…

By Dinamaana Kannada News

ವಿಶೇಷ ಮಕ್ಕಳನ್ನು ದೇವರ ಮಕ್ಕಳಂತೆ ಆರೈಕೆ

ದಾವಣಗೆರೆ : ವಿಶೇಷ ಮಕ್ಕಳನ್ನು ದೇವರ ಮಕ್ಕಳಂತೆ ಆರೈಕೆ ಮಾಡುತ್ತಾ, ಪೋಷಿಸುತ್ತಿರುವ ಅಂಗವಿಕಲ ಆಶಾಕಿರಣ ಟ್ರಸ್ಟ್ನಂತಹ ಸಂಸ್ಥೆಗಳ ಸೇವೆ ಮಾದರಿ…

By Dinamaana Kannada News

ರಾಷ್ಟ್ರಪ್ರಶಸ್ತಿ ನೀಡಲು ಅರ್ಜಿ ಆಹ್ವಾನ 

ದಾವಣಗೆರೆ ಜು.04 :  ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ…

By Dinamaana Kannada News

You Might Also Like

Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Political analysis
ರಾಜಕೀಯ

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?