Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಸಿಎಂ
ತಾಜಾ ಸುದ್ದಿ

ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ : ಸಿಎಂ

Dinamaana Kannada News
Last updated: March 9, 2024 1:16 pm
Dinamaana Kannada News
Share
The target of 60 thousand megawatt power generation in the next 7 years.
The target of 60 thousand megawatt power generation in the next 7 years.
SHARE

ಬೆಂಗಳೂರು ಮಾ 9:
ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಉಏಗಿಏ ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದರು. ಬಳಿಕ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆಧ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ನುಡಿದರು.
ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ ಎಂದು ಘೋಷಿಸಿದರು.
ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ30 ರಿಂದ ಶೇ50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಮುಂದುವರೆಸಲಿದೆ

ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ ಎಂದು ಪುನರುಚ್ಚರಿಸಿದರು.

ಸಂಶೋಧನೆಗಳು ರೈತರನ್ನು ಮುಟ್ಟಿದಾಗ ಅಭಿವೃದ್ದಿ ಸಾಧ್ಯ

ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ ಎಂದರು.
ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ50 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎಂದು ವ್ಯಂಗ್ಯವಾಡಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಗೋವಿಂದರಾಜು, ನಸೀರ್ ಅಹಮದ್ , ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಕ್ರೆಡೆಲ್ ಅಧ್ಯಕ್ಷರಾದ ಶೃಂಗೇರಿ ಶಾಸಕರಾದ ರಾಜುಗೌಡ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

TAGGED:. The target of 60 thousand megawatt power generation in the next 7 years. Davangere NewsDinamana.comದಿನಮಾನ.ಕಾಂಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Samaj Seva Siri-2024' Award, ಮಹಿಳಾ ಪತ್ರಕರ್ತರಿಗೆ ‘ಸಮಾಜ ಸೇವಾ ಸಿರಿ-2024’ ಪ್ರಶಸ್ತಿ
Next Article Everyone's cooperation is necessary to make it drug free: CM ಮಾದಕ ವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ: ಸಿಎಂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯ

ಹರಿಹರ:  ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯಿಸಿ…

By Dinamaana Kannada News

ದುರಂತ ಯುವನಾಯಕ ಎಂ.ಪಿ.ರವೀಂದ್ರ

ಒಂದು ರಾತ್ರಿಯಿಡೀ ರಾಜ್ಯ ರಾಜಕಾರಣದ ಒಳಸುಳಿಗಳನ್ನು ತೆರೆದಿಟ್ಟಿದ್ದರು.ಹೀಗೆ ಮಾತನಾಡುವಾಗ ತನ್ನ ತಂದೆ ಪ್ರಕಾಶರಿಗಾದ ಅನ್ಯಾಯದ ನೋವು ಅವರಲ್ಲಿತ್ತು. ಆ ಬಿಸಿಯಲ್ಲಿ…

By Dinamaana Kannada News

Davanagere | ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಆಲೂರು ನಿಂಗರಾಜ್ ಆಗ್ರಹ

ದಾವಣಗೆರೆ (Davanagere) : ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆಯನ್ನು ವಜಾ ಮಾಡಬೇಕು. ಅಲ್ಲದೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?