ದಾವಣಗೆರೆ (Davanagere): ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ವಾಹನ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರತಿ ವಾಹನ ಮಾಲೀಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಎಸ್ಪಿ ಉಮಾ ಪ್ರಶಾಂತ್ ಸೂಚನೆಯಂತೆ ನಗರದ ಡಿವೈಎಸ್ಪಿ ಶರಣಬಸವೇಶ್ವರ ಬೀಮರಾವ್ ಮಾರ್ಗದರ್ಶನದಲ್ಲಿ ದಾವಣಗೆರೆ ಟ್ರಾಫಿಕ್ ಪೊಲೀಸ್ ಸಿಪಿಐ ನಲವಾಗಲು ಮಂಜುನಾಥ್ ನೇತೃತ್ವದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್ಐ ಡಿ.ಎಚ್.ನಿರ್ಮಲ ಹಾಗೂ ಸಿಬ್ಬಂದಿ ಜಗದೀಶ್ ಅವರೊಂದಿಗೆ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದು ಆ ಸಮಯದಲ್ಲಿ ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿ ಪ್ರತ್ಯೇಕವಾಗಿ ಆಕ್ಟಿವ್ ಹೊಂಡ ಬೈಕ್ & ಹಿರೋ ಸ್ಪ್ಲೆಂಡರ್ ಬೈಕ್ ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕರು ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸುತ್ತಾ ಬಂದಿದ್ದು ಬೈಕ್ ಗಳನ್ನು ಜಪ್ತು ಪಡಿಸಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು 3 ನೇ ASCJ & JMFC ದಾವಣಗೆರೆ ನ್ಯಾಯಾಲಯಕ್ಕೆ ಎರಡು ಬೈಕ್ ಮಾಲೀಕರ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ನ್ಯಾಯಾಲಯವು ಆಕ್ಟಿವ್ ಹೊಂಡಾ ಬೈಕ್ ಮಾಲೀಕರಾದ ಮೋಹನ್ ರಾವ್, ದಾವಣಗೆರೆ ಹಾಗೂ ಹಿರೋ ಸ್ಪ್ಲೆಂಡರ್ ಬೈಕ್ ಮಾಲೀಕರಾದ ಲಕ್ಷ್ಮಿ ತಮ್ಮ ಬೈಕ್ ಗಳನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ಬೈಕ್ ಮಾಲೀಕರಿಗೆ ಪ್ರತ್ಯೇಕವಾಗಿ 25 ಸಾವಿರ ರೂ ದಂಡ ವಿಧಿಸಿ ತೀರ್ಪುನೀಡಿದೆ.