Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್
ತಾಜಾ ಸುದ್ದಿ

ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್

Dinamaana Kannada News
Last updated: January 10, 2025 3:10 am
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere):  ದಾವಣಗೆರೆ ದೃಶ್ಯಕಲಾ ಮಹಾ ವಿದ್ಯಾಲಯ ಇಲ್ಲಿವರೆಗೆ ಎಕರೆಗಟ್ಟಲೇ ಜಾಗ ಕಳೆದುಕೊಂಡಿದ್ದು, ಇಂತಹ ಕಾಲೇಜಿನ ಒಂದಿಂಚು ಭೂಮಿಯೂ ಪರರ ಪಾಲಾಗದಂತೆ ಕಾಪಾಡಿಕೊಳ್ಳುವತ್ತ ಕಾಲೇಜು ಹಾಗೂ ದಾವಿವಿ ಗಮನ ಹರಿಸಬೇಕು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್.ಬಡದಾಳ್ ಸಲಹೆ ನೀಡಿದರು.

ನಗರದ ದಾವಿವಿ ವಿಶ್ವ ವಿದ್ಯಾನಿಲಯ ದೃಶ್ಯಕಲಾ ಮಹಾ ವಿದ್ಯಾಲಯದ ವಜ್ರ ಮಹೋತ್ಸವ ಅಂಗವಾಗಿ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಚಿತ್ರಪಯಣವನ್ನು ವಿನೂತನವಾಗಿ ಕ್ಲಾಪ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ದೃಶ್ಯಕಲಾ ಮಹಾ ವಿದ್ಯಾಲಯ ಇಲ್ಲಿ ಪಡೆದು ಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು. ಇನ್ನು ಮುಂದೆ ಒಂದಿಂಚು ಭೂಮಿಯೂ ಕಾಲೇಜಿನ ಕೈತಪ್ಪದಂತೆ ಜಾಗ್ರತೆ ವಹಿಸಿ ಎಂದರು.

ದೃಶ್ಯಕಲಾ ಮಹಾ ವಿದ್ಯಾಲಯ ಹಾಗೂ ಸರ್ಕಾರಿ ಯುಬಿಡಿಟಿ ಕಾಲೇಜುಗಳು ದಾವಣಗೆರೆಯ ಎರಡು ಕಣ್ಣುಗಳಿದ್ದಂತೆ. ಜಿಲ್ಲೆಯ ಹೆಮ್ಮೆಯಾದ ಈ ಕಾಲೇಜಿನಲ್ಲಿ ಓದಿದ ಸಾವಿರಾರು ಜನ

ಇಂದು ರಾಜ್ಯ, ರಾಷ್ಟ್ರ, ಪರರಾಷ್ಟ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಇಂದಿಗೂ ತಮ್ಮ ಕಾಲೇಜಿನೊಂದಿಗೆ ಒಡನಾಟ ಹೊಂದಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಈ ಎರಡೂ ಕಾಲೇ

ಜುಗಳ ಕೊಡುಗೆಯೂ ಗಣನೀಯವಾಗಿದೆ. ಇಂತಹ ಕಾಲೇಜುಗಳ ಹಿತ ಕಾಯಬೇಕಾದ್ದು ಸಾರ್ವಜನಿಕರ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳು ಸೃಜನಶೀಲತೆ, ಕ್ರಿಯಾಶೀಲತೆ, ನಾವೀನ್ಯತೆಗಳಿಂದ ಕೂಡಿದ ಕಲಾಕೃತಿಗಳನ್ನು ರಚಿಸಿ, ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಇದು ಇಲ್ಲಿ ಕಲಿಯಲು ಬಂದ ವಿದ್ಯಾರ್ಥಿ ಗಳಿಗೆ ಸ್ಪೂರ್ತಿಯಾಗಬೇಕು. ಥೀಮ್ ಪಾರ್ಕ್‌ ಸಹ ಕಾಲೇಜು ಕ್ಯಾಂಪಸ್‌ನಲ್ಲಿ ಆರಂಭವಾಗಿದೆ. ಇದೂ ಸಹ ನಗರ, ಜಿಲ್ಲೆಯಷ್ಟೇ ಅಲ್ಲ, ಪರ ಊರಿನವರನ್ನೂ ಸೆಳೆಯುವ ತಾಣವಾಗುತ್ತಿದೆ. ಕಾಲೇಜಿನಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವ ಕಾರ್ಯಾಗಾರಗಳಿಗೆ ವರದಿಗಾರರ ಕೂಟ ಹಾಗೂ ತಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಡಾ.ಜೈರಾಜ ಎಂ.ಚಿಕ್ಕಪಾಟೀಲ್ ಮಾತನಾಡಿ, ದೃಶ್ಯಕಲಾ ಮಹಾ ವಿದ್ಯಾಲಯದಲ್ಲಿ ಪ್ರಸ್ತುತ ಸಂದರ್ಭದಲ್ಲಿ ದಾಖಲಾದ ವಿದ್ಯಾರ್ಥಿ-ವಿದ್ಯಾರ್ಥಿ ನಿಯರೇ ಅದೃಷ್ಟವಂತರು. ಈಗ ಕಾಲೇಜು 60ರ ಸಂಭ್ರಮದಲ್ಲಿದೆ. ಹಾಗಾಗಿ ನಿರಂತರ ಕಾರ್ಯಕ್ರಮ, ಕಲಾ ಚಟುವಟಿಕೆಗಳಾಗುತ್ತಿವೆ. ದೇಶ, ವಿದೇಶಗಳಲ್ಲಿ ನೆಲೆಸಿರುವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಒಡನಾಟವೂ ನಿಮಗೆ ಸ್ಪೂರ್ತಿಯಾಗಲಿದ್ದು, ನಿಮ್ಮಗಳ ಬದುಕು, ಭವಿಷ್ಯಕ್ಕೂ ಸರಿಯಾದ ಮಾರ್ಗದರ್ಶನ ಸಿಗಲು ಕಾಲೇಜಿನ ವಜ್ರ ಮಹೋತ್ಸವ ಕಾರಣವಾಗುತ್ತಿದೆ ಎಂದರು.

ಅರ್ಥಪೂರ್ಣ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶ ನಿಮ್ಮದಾಗಿದೆ. ಈಚಿನ ವರ್ಷಗಳಲ್ಲಿ ನಮ್ಮ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ತೋರುತ್ತಿರುವ ಗಣನೀಯ ಸಾದನೆ ಕಾಲೇಜಿನ ಘನತೆ ಹೆಚ್ಚಿಸುತ್ತಿದೆ. ಬೋಧಕ-ಬೋಧಕೇತರರ ಶ್ರಮ, ಸಹಕಾರವೂ ಗುರುತರವಾದುದು. ವಿದ್ಯಾರ್ಥಿ ಸಂಘದ ಉದ್ಘಾಟನೆ, ನೂತನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಇಷ್ಟೊಂದು ವೈಶಿಷ್ಟ್ಯ ಪೂರ್ಣ‍ವಾಗಿ ಆಯೋಜಿಸಿದ ನಿಮ್ಮೆಲ್ಲರ ಭವಿಷ್ಯ, ಕಲಾ ಪ್ರೌಢಿಮೆಯೂ ವೈಸಿಷ್ಟ್ಯ ಪೂರ್ಣವಾಗಿರಲಿ. ನೀವೆಲ್ಲರೂ ಚನ್ನಾಗಿ ಕಲಿದು, ಕಲಾ ಕ್ಷೇತ್ರವನ್ನು ಬೆಳೆಗುವ ಸಾಧಕರಾಗಿ ಹೊರ ಹೊಮ್ಮಬೇಕು ಎಂದು ಅವರು ಕರೆ ನೀಡಿದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಸೇಯೋ ಘಟಕ ಕಾರ್ಯಕ್ರಮಾಧಿಕಾರಿ ಡಾ.ಸತೀಶಕುಮಾರ.ಪಿ.ವಲ್ಲೇಪುರೆ ಮಾತನಾಡಿದರು.

ಸಂಘದ ಗೌರವ ಸಲಹೆಗಾರ್ತಿ ಕೀರ್ತನಾ ಅಲ್ಫೋನ್ಸಾ, ಅಧ್ಯಕ್ಷ ಟಿ.ವಿ,ದರ್ಶನ್, ಉಪಾಧ್ಯಕ್ಷ ಮಹಮ್ಮದ್ ಅಬ್ಬಾಸ್, ಬೋಧನಾ ಸಹಾಯಕರಾದ ಡಾ.ಸಂತೋಷಕುಮಾರ, ಕುಲಕರ್ಣಿ, ಡಾ.ಗಿರೀಶಕುಮಾರ, ದತ್ತಾತ್ರೇಯ ಭಟ್ಟ, ಶಿವಶಂಕರ ಸುತಾರ್, ಕೆ.ವಿ.ಪ್ರಮೋದ,ದರ್ಶನ್ ಚಕ್ರಸಾಲಿ, ರಂಗನಾಥ ಕುಲಕರ್ಣಿ, ಅರುಣ ಕಮ್ಮಾರ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು , ಪಾಲಕರು ಇದ್ದರು.

ರಾಧಿಕಾ, ನವ್ಯಾ, ಕೀರ್ತಿ, ಗಿರೀಶ, ಭರತ್ ಆಚಾರಿ ಕಾರ್ಯಕ್ರಮ ನಡೆಸಿಕೊಟ್ಟರು. ಸಮಾರಂಭದ ಸಲುವಾಗಿ ಫಿಲ್ಮ್ ಕಾನ್ಸೆಪ್ಟ್ ನಲ್ಲಿ ಸಿದ್ಧ ಪಡಿಸಿದ್ದ ಸಭಾಂಗಣ ವಿಶೇಷ ಗಮನ ಸೆಳೆಯಿತು.

2024-25ನೇ ಶೈಕ್ಷಣಿಕ ಸಾಲಿನಲ್ಲಿ ಈವರೆಗೆ ರಾಜ್ಯ-ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಹೆಚ್ಚಿನ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.

ಇದೇ ವೇಳೆ ಕನ್ನಡ ರಾಜ್ಯೋತ್ಸವದ ನಿಮಿತ್ತ ಕಾಲೇಜಿನ ವಿದ್ಯಾರ್ಥಿಗಳ ಸಂಘದಿಂದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆ ವಿಜೇತರಿಗೆ, ಇತರೆ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Read also : ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಒಳ್ಳೆಯ ಸಮಾಜ ನಿರ್ಮಾಣಕ್ಕೆ ಶಾಲಾ ಹಂತದಲ್ಲಿ ಮಕ್ಕಳ ಬೂನಾದಿ ಮುಖ್ಯ : ನ್ಯಾ.ಮಹಾವೀರ ಎಂ. ಕರೆಣ್ಣನವರ್
Next Article DAVANAGERE ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆಯಲ್ಲಿ ಮೇಳೈಸಿದ ಜನಪದ ಲೋಕ; ಯುವಜನೋತ್ಸವಕ್ಕೆ ಅದ್ದೂರಿ ಚಾಲನೆ !

ದಾವಣಗೆರೆ: ಯುವಜನೋತ್ಸವ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಜಾನಪದ ಮೇಳವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟನೆ ನೆರವೇರಿಸಿದರು. ಜನಪದ ಲೋಕದ ರಂಗು…

By Dinamaana Kannada News

LG Havanur | ಹಾವನೂರು-ಚಿಂತನಾಕ್ರಮ ಯಾಕೆ ಬೇಕು?  

Kannada News | Dinamaana.com | 24-08-2024 ಧರ್ಮಾಧಾರಿತ ರಾಜಕಾರಣದ ಒಳಸುಳಿಗಳಿಗೆ ಸಿಕ್ಕ ಭಾರತೀಯ ರಾಜಕಾರಣಕ್ಕೀಗ ಸಂಕಷ್ಟದ ಕಾಲ.ಗಾಂಧಿ,ಅಂಬೇಡ್ಕರ್,ಮಾರ್ಕ್ಸ್ ಮತ್ತು…

By Dinamaana Kannada News

Davanagere |ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು : ಎನ್.ಎ. ಮುರುಗೇಶ್

ದಾವಣಗೆರೆ (Davanagere): ಯಾವುದೇ ಮತ, ಧರ್ಮ, ಭೇದಗಳಿಲ್ಲದೆ ಎಲ್ಲಾ ಮಕ್ಕಳಿಗೂ ಉಚಿತ ಪುಸ್ತಕಗಳನ್ನು ವಿತರಿಸಿದ ಈ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?