ಒಟ್ಟು ಜಲಾಶಯದ ಹಿನ್ನೀರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ಮೂಲಕ ತೆಗೆದುಕೊಳ್ಳುವುದು ಮತ್ತು ಒಟ್ಟು ಪ್ರಮಾಣದ ನೀರನ್ನು 9 ತಿಂಗಳುಗಳ ಜಲಾಶಯದ ಕ್ಯಾನಲ್ ನಿಂದ ಗ್ರಾವಟಿ ಮೂಲಕ ತೆಗೆದು ಕೊಳ್ಳುವುದು. ಕ್ಯಾನಲ್ ನಲ್ಲಿ ನೀರು ಲಭ್ಯವಿಲ್ಲದಿರುವ ಮೂರು ತಿಂಗಳ ಅವಧಿಯಲ್ಲಿ ಭದ್ರಾ ಜಲಾಶಯ ಹಿನ್ನಿರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ನೀರನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ 9 ತಿಂಗಳು ವಿದ್ಯುತ್ ಶುಲ್ಕ ಉಳಿತಾಯ ಮತ್ತು ಗ್ರಾವಿಟಿ ಪ್ಲೋವನ್ನು ಸಮರ್ಥವಾಗಿ ಬಳಸಬಹುದಾಗಿದೆ ಎಂದು ತಿಳಿಸಲಾಗಿರುವುದು ಇವೆರಡು ನಮ್ಮ ಭಾಗದ ರೈತರಿಗೆ ಮಾರಕವಾಗಲಿದೆ ಎನ್ನುವುದು ಆರೋಪ.
ಜಲಾಶಯದ ಸ್ಥಳದಿಂದ ಕೇವಲ 500 ಮೀಟರ್ ದೂರದಲ್ಲಿ ಭದ್ರಾ ನದಿ ಇದ್ದು ಇಲ್ಲಿ ನೀರಿನ ಪ್ರಮಾಣ 365 ದಿನವು ಹರಿವು ಇರುವ ಕಾರಣ ನದಿ ಭಾಗದಿಂದ ಜಾಕ್ವೆಲ್ ನಿರ್ಮಿಸಿ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದಲ್ಲಿ ಭದ್ರಾ ಅಚ್ಚು ಕಟ್ಟಿನ ರೈತರಿಗೆ ಬೆಳೆ ಬೆಳೆಯಲು ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ರೈತರುಗಳ ಬೇಡಿಕೆಯಾಗಿದೆ.
ಈ ಹಿನ್ನಲೆಯಲ್ಲಿ ಶೀಘ್ರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಜಲ ಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗುವುದು. ಭದ್ರಾ ಅಚ್ಚುಕಟ್ಟು ಭಾಗದ ರೈತರೊಂದಿಗೆ ನಾವಿದ್ದೇವೆ ಎಲ್ಲರೂ ಒಟ್ಟಾಗಿ ಸಮಸ್ಯೆ ಉಲ್ಬಣವಾಗದ ರೀತಿಯಲ್ಲಿ ಚರ್ಚಿಸೋಣ ಎಂದು ರೈತರಿಗೆ ಸಚಿವರು ಅಭಯವನ್ನು ನೀಡಿದರು.