Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: June 4, 2025 2:51 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ ಕ್ರಮದಲ್ಲಿ ತಿದ್ದಿ ತೀಡಬೇಕು ಜೊತೆಗೆ ಉತ್ತಮ ಪ್ರಜೆಯಾಗಿ ರೂಪಿಸಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಶಿಕ್ಷಕರಿಗೆ ಕರೆ ನೀಡಿದರು.

 

ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿಯಲ್ಲಿ ಬುಧವಾರ ಸ್ವಾಮಿ ವಿವೇಕಾನಂದ ಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಾಣಗೊಂಡ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶಾಲಾ ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಗುರುತಿಸಬೇಕು ಅವರನ್ನು ಪುನಃ ಶಾಲೆಗೆ ದಾಖಲಿಸಿ ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು.ಮಕ್ಕಳು ದೇಶದ ನಿಜವಾದ ಆಸ್ತಿ ಅವರನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

 

ಮಕ್ಕಳಲ್ಲಿ ಪರಿಸರ, ಹಸಿರು‌ ಇಂಧನ, ನೀರಿನ‌ ಸಂರಕ್ಷಣೆ,ಗುಣಮಟ್ಟದ ಗಾಳಿ ಬಗ್ಗೆ ಅರಿವು ಮೂಡಿಸಬೇಕು.ಶಿಕ್ಷಕರು ಮಾತೃಹೃದಯದಿಂದ ಮಕ್ಕಳ ಸಮಸ್ಯೆಗೆ ಸ್ಪಂದಿಸಬೇಕು.ಶಿಕ್ಷಣದ ಜೊತೆಗೆ ಸಂಸ್ಕೃತಿ,ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು.ಮಕ್ಕಳು ತಮ್ಮ ಬೆಳವಣಿಗೆಗೆ ಪೂರಕವಾದ ಹೊಸ ವಿಷಯಗಳನ್ನು ತಿಳಿದುಕೊಳ್ಳುವುದು ಅತಿ ಅಗತ್ಯ. ಮಕ್ಕಳು ತಮ್ಮ ದಿನಚರಿಯನ್ನು ಬರೆಯಬೇಕು ಇದರಿಂದ ಮುಂದಿನ ಪ್ಲಾನ್ ಇರುತ್ತದೆ ಹಾಗೂ ಅದನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಬೇಕು.ಆಗ ಉನ್ನತಮಟ್ಟಕ್ಕೆ ಹೋಗಲು ಸಾಧ್ಯ ಎಂದರು.

 

Read also : Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್

ಇಂದಿನ ಮಕ್ಕಳು ಹೆಚ್ಚಾಗಿ ಮೊಬೈಲ್ ಹಾಗೂ ಟಿವಿ ಯ ಬಳಕೆಯಲ್ಲೇ ಮುಳುಗಿದ್ದಾರೆ.ಇದರಿಂದ ಊಟ ಹಾಗೂ‌ ನಿದ್ರೆ ಮಾಡುವುದಿಲ್ಲ. ಮಕ್ಕಳಿಗೆ ಮಾನಸಿಕ ಸಮಸ್ಯೆಗಳು ಉಂಟಾಗುತ್ತಿವೆ ಆದ್ದರಿಂದ ಮಕ್ಕಳಿಗೆ ಮೊಬೈಲ್ ಬಿಡಿ ಪುಸ್ತಕ ಹಿಡಿ ಎಂಬಂತೆ ಮಾಡಬೇಕು. ಪ್ರತಿಯೊಬ್ಬ ಶಿಕ್ಷಕರು ಮಕ್ಕಳ‌ಜೊತೆ ಉತ್ತಮ ಒಡನಾಟ ಹೊಂದಬೇಕು.ಶಿಕ್ಷಕರು ಮಕ್ಕಳಿಗೆ ಬೇಕು- ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಒಳ್ಳೆಯ ಶಿಕ್ಷಕರಾಗಲು ಸಾಧ್ಯ.ವಿದ್ಯಾರ್ಥಿಗಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು. ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ‌ಹಾಗೂ‌ ಗಣಿತ‌ ಕಷ್ಟದ ವಿಷಯಗಳು ಎನ್ನುವ ಮಾತಿದೆ ಈ‌ಬಗ್ಗೆ ಗಮನ‌ಹರಿಸಬೇಕು.ಸರಳವಾಗಿ‌ ಅರ್ಥೈಸುವ ವಿಧಾನ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

 

ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಪ್ರಮಾಣ ಕುಸಿತಕಾಣುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವರ್ಷ ವರ್ಷವೂ ದಾಖಲಾತಿ ಕಡಿಮೆ ಆಗುತ್ತಿದ್ದು,  ಇದನ್ನು ತಡೆಯಲು ಪೋಷಕರೊಂದಿಗೆ ನಿಯಮಿತ ಸಭೆಗಳನ್ನು ನಡೆಸಬೇಕು. ಬಿಇಒ ಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು.ನಮ್ಮ ಶಾಲೆ ನಮಗೆ ಹೆಮ್ಮೆಯಾಗಬೇಕು ಎಂದರು.

 

ಮಾಜಿ ಸಚಿವರಾದ ಎಸ್.ಎ ರವೀಂದ್ರನಾಥ್, ಬಿಇಒ ಪುಷ್ಪಲತಾ,ಗ್ರಾ.ಪಂ‌.ಅಧ್ಯಕ್ಷರಾದ ಇ.ಪ್ರಸನ್ನ,ಉಪಾಧ್ಯಕ್ಷೆ ರೇಣುಕಾಬಾಯಿ, ಪಿಡಿಒ ಜಯಲಕ್ಷ್ಮಿ,ಜಿಲ್ಲಾ ಸರ್ಕಾರಿ‌ ಆಸ್ಪತ್ರೆಯ  ರಕ್ಷಾ ಸಮಿತಿ ಸದಸ್ಯರಾದ ಎಸ್ .ಎಂ ರುದ್ರೇಶ್ ,ಶಾಲಾ ಶಿಕ್ಷಕವೃಂದ ಹಾಗೂ ಶಿರಮಗೊಂಡನಹಳ್ಳಿ‌ ಗ್ರಾಮಸ್ಥರು‌ ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Indira Canteen davanagere Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್
Next Article judgement dvg Davanagere | ವೃದ್ಧ ದಂಪತಿ ಕೊಲೆ ಪ್ರಕರಣ: ಮೂವರಿಗೆ ಜೀವಾವಧಿ ಶಿಕ್ಷೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ಎರಡು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡುತ್ತೇವೆ ಎಂದು ದಾವಣಗೆರೆ…

By Dinamaana Kannada News

Davanagere | ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere); ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ…

By Dinamaana Kannada News

ಯುವತಿಗೆ ಪ್ರೀತಿಸುವಂತೆ ಪೀಡಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪಿಗೆ ಶಿಕ್ಷೆ

ದಾವಣಗೆರೆ (Davanagere): ಯುವತಿ ಪ್ರೀತಿಸುವಂತೆ ಪೀಡಿಸಿ, ಅವಾಚ್ಯವಾಗಿ ಬೈದು, ಪ್ರಾಣ ಬೆದರಿಕೆ ಹಾಕಿದ ಪ್ರಕರಣದ ಆರೋಪಿಗೆ 3 ತಿಂಗಳು ಕಾರಾಗೃಹ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?