Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು
ತಾಜಾ ಸುದ್ದಿ

ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು

Dinamaana Kannada News
Last updated: April 30, 2025 1:15 pm
Dinamaana Kannada News
Share
World Workers' Day
World Workers' Day
SHARE

ಮೇ 1 – ವಿಶ್ವ ಕಾರ್ಮಿಕರ ದಿನಾಚರಣೆ ಎಂದೊಡನೆಯೇ 8 ಘಂಟೆಯ ಕೆಲಸದ ಅವಧಿಯ ಬೇಡಿಕೆಯನ್ನು ಮುಂದಿಟ್ಟುಕೊಂಡು 1886 ಇಸವಿಯ ಮೇ ಒಂದನೇ ತಾರೀಕಿನಂದು ಅಮೇರಿಕಾದ ಚಿಕಾಗೋದ ಇಲಿನಾಯ್ಸ್ ಪ್ರದೇಶದಲ್ಲಿ ಎಡಪಂಥೀಯ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ನಡೆಸಿದ ಹೋರಾಟವು ನೆನಪಿಗೆ ಬರುತ್ತದೆ.

ದಿನದ 24 ಘಂಟೆ ಪೂರ್ತಿ ಮಾಲೀಕರ ಕಾರ್ಖಾನೆಗಳಲ್ಲಿ ದುಡಿಯಬೇಕಾಗಿದ್ದ ಕೆಲಸಗಾರರು ವಿಶ್ರಾಂತಿ, ಕೌಟುಂಬಿಕ ಜೀವನ ಹಾಗೂ ಸಾಮಾಜಿಕ ಜೀವನದಿಂದ ವಂಚಿತರಾಗಿದ್ದರು. 19 ನೇ ಶತಮಾನವು ಅಮೇರಿಕಾ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಕೈಗಾರಿಕಾ ಕ್ರಾಂತಿಗೆ ಸಾಕ್ಷಿಯಾಗಿದ್ದ ಪರಿಣಾಮವಾಗಿ ಅಸಂಖ್ಯಾತ ಉದ್ಯೋಗ ಸೃಷ್ಟಿಗೆ ಕಾರಣೀಭೂತವಾಗಿದ್ದರೂ ಕಾರ್ಮಿಕರ ಬದುಕು ಮಾತ್ರ ಅತ್ಯಂತ ನಿಕೃಷ್ಟವಾದ ಸ್ಥಿತಿಯಲ್ಲಿತ್ತು.

ಕಾರ್ಮಿಕರಿಗೆ ಕನಿಷ್ಠ ಸೌಲಭ್ಯವೂ ಸಿಗುತ್ತಿರಲಿಲ್ಲ. ಅಕ್ಷರಶಃ  ಪ್ರಾಣಿಗಳ ರೀತಿ ಕಾರ್ಮಿಕರನ್ನು ದುಡಿಸಿ ಕೊಳ್ಳಲಾಗುತಿತ್ತು. ಕಾರ್ಮಿಕರ ಶ್ರಮ, ಬೆವರು ಮಾಲೀಕರ ಖಜಾನೆ ತುಂಬಿಸುತಿತ್ತೇ ಹೊರತು ಲಾಭದ ಒಂದಂಶವೂ ಕಾರ್ಮಿಕರಿಗೆ ತಲುಪುತ್ತಿರಲಿಲ್ಲ‌. ಮೂಲಭೂತ ಸೌಕರ್ಯ, ವೈದ್ಯಕೀಯ, ಶಿಕ್ಷಣ ಸೌಲಭ್ಯಗಳಂತೂ ಮರೀಚಿಕೆಯಾಗಿತ್ತು.

ಕಾರ್ಮಿಕರ ಹಿತ ರಕ್ಷಣೆಯ ಯಾವುದೇ ಕಾನೂನುಗಳು, ಒಪ್ಪಂದಗಳು ಇರದಿದ್ದ ಕಾಲವದು. ಅಂತಹ ಪ್ರತಿಕೂಲದ ಕಾಲಘಟ್ಟದಲ್ಲಿ ಕಾರ್ಮಿಕರನ್ನು ಸಂಘಟಿಸಿ, ಒಗ್ಗೂಡಿಸಿ, ಹೋರಾಟಕ್ಕೆ ಅಣಿಗೊಳಿಸಿ 1886 ರ ಮೇ ತಿಂಗಳಲ್ಲಿ  ನಡೆಸಿದ ಹೋರಾಟ ಚಾರಿತ್ರಿಕವಾಗಿ ದಾಖಲಾಯಿತು.

ಕಾರ್ಮಿಕರ ಒಗ್ಗಟ್ಟು, ಹೋರಾಟದ ಕೆಚ್ಚನ್ನು ಅರಗಿಸಿಕೊಳ್ಳದ ಮಾಲೀಕವರ್ಗ ಕಾರ್ಮಿಕರು ಶಾಂತಿಯುತವಾಗಿ ನಡೆಸುತ್ತಿದ್ದ ಚಳುವಳಿಯ ಮೇಲೆ ಗೂಂಡಾಗಳನ್ನು ಛೂ ಬಿಟ್ಟರು. ಆಡಳಿತದ ಮೇಲೆ ಹಿಡಿತ ಸಾಧಿಸಿ ಪೋಲಿಸ್ ಪಡೆಯನ್ನು ಕಾರ್ಮಿಕರ ಮೇಲೆ ದಾಳಿ ನಡೆಸುವಂತೆ ಮಾಡಿದರು. ಒಂದೆಡೆ ಗೂಂಡಾಗಳ ದಾಳಿ, ಇನ್ನೊಂದೆಡೆ ಪೋಲೀಸರ ದಾಳಿ‌. ಚಳುವಳಿ ನಡೆಯುತ್ತಿದ್ದ ಪ್ರದೇಶದಲ್ಲಿ ರಕ್ತದ ಹರಿಯಿತು. ಹಿಂಸೆ ತಾಂಡವಾಡಿತು. ಹಲವು ಕಾರ್ಮಿಕರು ಹುತಾತ್ಮರಾದರು. ಆದರೆ ಸಹಕಾರ್ಮಿಕರ ರಕ್ತವು ಹೋರಾಟಗಾರರಲ್ಲಿ ಇನ್ನಷ್ಟು ಕೆಚ್ಚು ಬೆಳೆಯಿತೇ ಹೊರತು ಹೋರಾಟದಿಂದ ಹಿಂದೆ ಸರಿಯುವಂತೆ ಮಾಡಲಿಲ್ಲ. ಹೋರಾಟವನ್ನು ಧಮನಿಸಲು ಮಾಲೀಕ ವರ್ಗದಿಂದ ವಾಮಮಾರ್ಗದ ಅನೇಕ ಕ್ರೂರವಾದ ಪ್ರಯತ್ನಗಳು ನಡೆದವು.  ಕಾರ್ಮಿಕ ಸಂಘಟನೆಗಳು ಎದೆಗುಂದಲಿಲ್ಲ‌. ಕಾರ್ಮಿಕರು ಹಿಂದಡಿಯಿಡಲಿಲ್ಲ.

Read also : ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್

ಕೊನೆಗೂ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಕಾರ್ಮಿಕರ ಹೋರಾಟವು ವಿಜಯದಲ್ಲಿ ಅಂತ್ಯಗೊಂಡಿತು. ನ್ಯಾಯಯುತ ಬೇಡಿಕೆಯಾದ ಕಾರ್ಮಿಕರಿಗೆ ದಿನದ 8 ಘಂಟೆಯ ಕೆಲಸದ ಅವಧಿ ಜಾರಿಗೆ ಬಂತು. 8 ಘಂಟೆ ಕೆಲಸ – 8 ಘಂಟೆ ಸಾಮಾಜಿಕ ಜೀವನ – 8 ಘಂಟೆ ವಿಶ್ರಾಂತಿ ಎಂಬ ಪರಿಕಲ್ಪನೆಯು ವಿಶ್ವದಾದ್ಯಂತ ಜಾರಿಯಾಯಿತು. ಕಾರ್ಮಿಕರನ್ನು ಸಂಘಟಿಸಿ ಹೋರಾಟವನ್ನು ರೂಪಿಸಿ ವಿಜಯವನ್ನು ತಂದುಕೊಟ್ಟ ಕೀರ್ತಿ ಎಡಪಂಥೀಯ ‌ಕಾರ್ಮಿಕ ಸಂಘಟನೆಗಳಿಗೆ ಸಲ್ಲುತ್ತದೆ ಎನ್ನುವುದು ಇಲ್ಲಿ ಗಮನಾರ್ಹವಾಗಿದೆ. ಹೋರಾಟ ನಡೆದ ಸ್ಥಳವಾದ ಚಿಕಾಗೋ ನಗರಿಯ ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್ ಚೌಕ ಇಂದಿಗೂ ಕಾರ್ಮಿಕರ ಬಲಿದಾನದ ದ್ಯೋತಕವಾಗಿ ಚಿರಸ್ಥಾಯಿಯಾಗಿ ಉಳಿದಿದೆ. ಈ ಚರಿತ್ರಾರ್ಹ ಹೋರಾಟದ ನೆನಪಿಗಾಗಿ ಪ್ರತೀ ವರ್ಷ ಮೇ ಒಂದನೇ ತಾರೀಕನ್ನು ವಿಶ್ವದಾದ್ಯಂತ “ಕಾರ್ಮಿಕ ದಿನಾಚರಣೆ”ಯನ್ನಾಗಿ ಆಚರಿಸಲು ನಿರ್ಧರಿಸಲಾಯಿತು.

1886 ರಿಂದ ಆರಂಭಗೊಂಡು ಇಲ್ಲಿಯ ತನಕ ಅಸಂಖ್ಯಾತ ಕಾರ್ಮಿಕ ಚಳುವಳಿಗಳು ಮತ್ತು ಹೋರಾಟಗಳು ನಡೆದಿವೆ‌. ಅದೇ ರೀತಿಯಲ್ಲಿ ಕಾರ್ಮಿಕ ಸಂಘಟನೆಗಳೂ ಅಸಂಖ್ಯಾತ ಸಂಖ್ಯೆಯಲ್ಲಿವೆ‌. ನಿರಂತರವಾದ ಸಂಘಟನಾತ್ಮಕ ಕೆಲಸ, ನಿರಂತರ ಹೋರಾಟವೇ ಕಾರ್ಮಿಕ ಸಂಘಗಳ ಉಸಿರು. ಹೋರಾಟದ ಕಿಚ್ಚು ನಂದಿತು ಅಂತಾದರೆ ಕಾರ್ಮಿಕ ವರ್ಗದ ಸ್ಥಿತಿ 1886 ರ ಪೂರ್ವ ಪರಿಸ್ಥಿತಿಗೆ ಮರುಳುವುದರಲ್ಲಿ ಸಂಶಯವಿಲ್ಲ.  ಒಂದೆಡೆ ಇಲ್ಲಿ ತನಕ ಹೋರಾಟದ ಮೂಲಕ ಗಳಿಸಿರುವ ಸೌಲಭ್ಯಗಳನ್ನು ರಕ್ಷಿಸಿಕೊಳ್ಳುವ ಸವಾಲು, ಇನ್ನೊಂದೆಡೆ ಪಡೆಯಬೇಕಾಗಿರುವ ಸೌಲಭ್ಯಗಳಿಗಾಗಿ ಹೋರಾಟ.

ಒಟ್ಟಿನಲ್ಲಿ “ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು”. ಸರಕಾರಗಳು ಯಾವತ್ತಿಗೂ ಮಾಲೀಕರ ಪರವೇ ಇರುವುದರಿಂದ ಯಾವಾಗಲೂ ವಿರೋಧ ಪಕ್ಷದ ನೆಲೆಯಲ್ಲಿಯೇ ನಿಂತು ಹೋರಾಡಬೇಕಾದ ಅನಿವಾರ್ಯತೆಯೂ ಈಗಲೂ ಇದೆ. ಆಳುವ ಸರಕಾರಗಳನ್ನು ಸದಾ ಕಾಲ ವಿರೋಧಿಸಿಕೊಂಡೇ ಹೋರಾಡುವುದು ಸಂಘಟನೆಗಳಿಗೆ ನಿಜಕ್ಕೂ ಸವಾಲಿನ ಕೆಲಸ. ಪ್ರತಿಯೊಂದು ನ್ಯಾಯಯುತ ಬೇಡಿಕೆಗಳ ಈಡೇರಿಕೆಗೂ ಹೋರಾಟದ ಮೊರೆ ಹೋಗಬೇಕಾದ ಪರಿಸ್ಥಿತಿ ಇದೆ. ದೇಶದ ಅಭಿವೃದ್ಧಿಗೆ ಕಾರ್ಮಿಕರೂ ಕಾರಣ ಎನ್ನುವುದನ್ನು ಅರಿತುಕೊಂಡು ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ಸೌಲಭ್ಯಗಳನ್ನು ನೀಡುವ ಉದಾರತೆ ಸರಕಾರ ನಡೆಸುವವರಿಗೆ ಇರಬೇಕಾದ್ದು ಅತ್ಯಗತ್ಯವಾಗಿದೆ‌.

1991 ರ ನಂತರ ಬಂದ ಕೇಂದ್ರ ಸರಕಾರ ಜಾರಿಗೆ ತಂದ ಖಾಸಗಿಕರಣ, ಜಾಗತಿಕರಣ, ಉದಾರೀಕರಣದ ಕರಿನೆರಳು ಕಾರ್ಮಿಕವರ್ಗವನ್ನು ಹೈರಾಣಾಗಿಸಿವೆ. ಮಾಲೀಕ ವರ್ಗದ, ಬಂಡವಾಳಶಾಹಿ ವ್ಯವಸ್ಥೆಯ ಒತ್ತಡದಿಂದಾಗಿ ಆಗಿಂದಾಗ್ಗೆ ಕಾರ್ಮಿಕರ ಕಾಯ್ದೆಗೆ ತಿದ್ದುಪಡಿಯನ್ನು ತರುವುದರ ಮೂಲಕ ಕಾರ್ಮಿಕರ ಪರವಾದ ಕಾನೂನುಗಳನ್ನು ದುರ್ಬಲಗೊಳಿಸಿವೆ. ಇದು ಕಾರ್ಮಿಕ ಸಂಘಟನೆಗಳಿಗೆ ಇನ್ನಷ್ಟು ಮುಳುವಾಗುತ್ತಿದೆ.

ಸಂಸತ್ತಿನಲ್ಲಿ‌ ಹಾಗೂ ವಿಧಾನಸಭೆಗಳಲ್ಲಿ  ಕಾರ್ಮಿಕರ ಪರವಾಗಿ‌ ಮಾತನಾಡುವ ಜನಪ್ರತಿನಿಧಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲು ಸಹಕಾರಿಯಾಗಿದೆ. ದೇಶದ ಅತ್ಯಂತ ದೊಡ್ಡ ಸಂಖ್ಯೆಯಲ್ಲಿರುವ ಕಾರ್ಮಿಕ ವರ್ಗ ರಾಜಕೀಯ ಶಕ್ತಿಯಾಗಿ ರೂಪಾಂತರಗೊಳ್ಳದಿರುವುದೇ ಇಂದಿನ ಕಾರ್ಮಿಕ ವಿರೋಧಿ ಆಡಳಿತಕ್ಕೆ ಕಾರಣವಾಗಿದೆ. ಕಾರ್ಮಿಕರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಕೂಡಾ ಕಾರ್ಮಿಕ ಸಂಘಗಳಿಗೆ ಸವಾಲಿನ ಕೆಲಸವಾಗಿದೆ. ಈ ಸವಾಲನ್ನು ಅವರು ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮಾತ್ರ ಕಾರ್ಮಿಕ ವರ್ಗ ನೆಮ್ಮದಿಯ ಜೀವನ ಸಾಗಿಸುವ ವಾತಾವರಣ ಸೃಷ್ಟಿಯಾಗಬಹುದೇನೋ.

1920 ನೇ ಇಸವಿ ಅಕ್ಟೋಬರ್ 31 ರಂದು ಜನ್ಮತಾಳಿದ ಭಾರತ ದೇಶದ ಪ್ರಪ್ರಥಮ ಕಾರ್ಮಿಕ ಸಂಘಟನೆಯಾದ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಂಘಟನೆಯು ತನ್ನ 105 ವರ್ಷಗಳ ಭವ್ಯ ಇತಿಹಾಸದಲ್ಲಿ ಹೋರಾಟದ ಪರಂಪರೆಯನ್ನು ಕಾರ್ಮಿಕವರ್ಗಕ್ಕೆ ನೀಡಿದೆ. ದೇಶದ ಸ್ವಾತಂತ್ರ್ಯದ ಹೋರಾಟದಲ್ಲಿ ಭಾಗವಹಿಸಿ ಕಾರ್ಮಿಕವರ್ಗವನ್ನು ದೇಶದ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸುವಂತೆ ಮಾಡಿದ ಮಹಾನ್ ಕಾರ್ಮಿಕ ಸಂಘಟನೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯದ ನಂತರ ಕಾರ್ಮಿಕ ವರ್ಗದ ಶೋಷಣೆಯ ವಿರುದ್ಧ ಎಐಟಿಯುಸಿ ನಡೆಸಿದ ನಿರಂತರವಾದ ಹೋರಾಟಗಳಿಂದ ಕಾರ್ಮಿಕ ವರ್ಗದ ರಕ್ಷಣೆಗಾಗಿ ಹಲವಾರು ಕಾನೂನುಗಳು ಜಾರಿಯಾಗಿವೆ.

ಈ ಎಲ್ಲ ಹೋರಾಟಗಳ ಹಿಂದೆಯೂ ಅಪಾರವಾದ ತ್ಯಾಗ ಬಲಿದಾನಗಳಿವೆ. ಸಂಘಟನೆಯೊಳಗೇ ಇದ್ದು ಬಂಡವಾಳಶಾಹಿಗಳ ಆಮಿಷಕ್ಕೆ ಒಳಗಾಗಿ ಸಂಘಟನಾ ದ್ರೋಹವೆಸಗಿದ  ನಂಬಿಕೆದ್ರೋಹಿಗಳ ಕುತಂತ್ರದಿಂದ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಂಘಟನೆಯು ಅನೇಕ ಬಾರಿ ಘಾಸಿಗೊಂಡಿದೆ. ಆದರೂ ಇಂದಿಗೂ ಕಾರ್ಮಿಕ ವರ್ಗದ ನಂಬಿಕೆಯನ್ನು ಉಳಿಸಿಕೊಂಡು ಆಳುವ ವರ್ಗದ ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳ ವಿರುದ್ಧ ಸತತವಾಗಿ ಹೋರಾಡುತ್ತಿದೆ.

ಈ ಎಲ್ಲ ಸಮಸ್ಯೆ, ಸವಾಲುಗಳ ನಡುವೆಯೇ ಇನ್ನೊಂದು ಕಾರ್ಮಿಕ ದಿನಾಚರಣೆ ಬಂದಿದೆ. ಒಬ್ಬ ಪ್ರಜ್ಞಾವಂತ, ಜವಾಬ್ದಾರಿಯುತ ಮತ್ತು ನಿಷ್ಠಾವಂತ ಕಾರ್ಮಿಕನು ತಾನು ಪ್ರತಿನಿಧಿಸುವ ವರ್ಗದ ಪ್ರಸ್ತುತ ಸನ್ನಿವೇಶ, ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳು, ಅವುಗಳಿಗೆ ತಕ್ಕನಾಗಿ ಭವಿಷ್ಯದಲ್ಲಿ ರೂಪಿಸಬೇಕಾದ ಹೋರಾಟ ಇವುಗಳ ಕುರಿತಾಗಿ ಗಂಭೀರ ಚಿಂತನೆ ನಡೆಸಿ ತತ್ವ ಸಿದ್ದಾಂತಗಳ ಮೂಲಕ ಪ್ರಬಲ ಕಾರ್ಮಿಕ ಮುಖಂಡನಾಗಿ ಹೊರಹೊಮ್ಮಿ ಕಾರ್ಮಿಕ ವರ್ಗವನ್ನು ಮುನ್ನೆಡೆಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಮಿಕ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿಕೊಳ್ಳಬಹುದಾಗಿದೆ. ಸಮಸ್ಯೆಗಳು ಇವೆ ಎಂದ ಮಾತ್ರಕ್ಕೆ ಕಾರ್ಮಿಕರು ತಮ್ಮ ಬದುಕನ್ನು ಕಟ್ಟಿಕೊಳ್ಳುವುದನ್ನು ನಿಲ್ಲಿಸಲಾಗದು. ಜೊತೆಗೆ ಸಂಘಟನೆ, ಹೋರಾಟ, ಚಳುವಳಿಗಳು ಎಲ್ಲವೂ ಸಾಗಬೇಕು. ಹಾಗಾಗಿಯೇ “ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು”.

“ವಿಶ್ವ ಕಾರ್ಮಿಕರ ದಿನಾಚರಣೆಗೆ ಜಯವಾಗಲಿ” “ವಿಶ್ವ ಕಾರ್ಮಿಕರ ಐಕ್ಯತೆ ಚಿರಾಯುವಾಗಲಿ”

ಕೆ.ರಾಘವೇಂದ್ರ ನಾಯರಿ ದಾವಣಗೆರೆ

TAGGED:workersWorld Workers' Dayಕಾರ್ಮಿಕರುವಿಶ್ವ ಕಾರ್ಮಿಕರ ದಿನಾಚರಣೆ
Share This Article
Twitter Email Copy Link Print
Previous Article ದಾವಣಗೆರೆ ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್
Next Article ಹರಿಹರ ಹರಿಹರ ಗ್ರಂಥಾಲಯ “ಬಸವ ಜಯಂತಿ”

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿದೇಶದಲ್ಲಿ “ಭಾರತ ವಚನ ಸಂಸ್ಕೃತಿ” ಯಾತ್ರೆ

ದಾವಣಗೆರೆ  (Davanagere) :  ರಾಷ್ಟ್ರೀಯ ಬಸವ ಪ್ರತಿಷ್ಠಾನವು  ದಶಮಾನೋತ್ಸವದ ಅಂಗವಾಗಿ ಬಾಲಿ, ಮಲೇಷ್ಯಾ ಮತ್ತು ಥಾಯ್ಲೆಂಡ್‌ಗಳಲ್ಲಿ 11 ದಿನಗಳ 'ಭಾರತ…

By Dinamaana Kannada News

ಜ.5, 6 ರಂದು ರಾಜ್ಯ ಮಟ್ಟದ ಯುವಜನೋತ್ಸವ : ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ದಾವಣಗೆರೆ,ಜ.3(Davanagere) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು…

By Dinamaana Kannada News

Davanagere | ಹೊಸ ಜವಳಿ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ.8 (Davanagere):  ಪರಿಶಿಷ್ಟ ಜಾತಿ ವಿಶೇಷ ಘಟಕ ಮತ್ತು ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ನೇಕಾರರ ವಿಶೇಷ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

By Dinamaana Kannada News
davanagere
ತಾಜಾ ಸುದ್ದಿಅಪರಾಧ ಸುದ್ದಿ

ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

By Dinamaana Kannada News
Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?