Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವಜನೋತ್ಸವ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿ: ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಯುವಜನೋತ್ಸವ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲಿ: ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: October 15, 2025 11:22 am
Dinamaana Kannada News
Share
MLA basavanathappa
SHARE

ದಾವಣಗೆರೆ: ಯುವಜನೋತ್ಸವ ನಗರ ಪ್ರದೇಶಕ್ಕೆ ಸೀಮಿತವಾಗುವುದಕ್ಕಿಂತ ಅತೀ ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಆಯೋಜಿಸುವುದರಿಂದ ಗ್ರಾಮೀಣ ಪ್ರತಿಭೆಗಳು ಹೊರಹೊಮ್ಮಲಿವೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.

ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್, ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾ ವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ, ಜಿಲ್ಲಾ ವಿಜ್ಞಾನಾಸಕ್ತರ ಬಳಗದ ಆಶ್ರಯದಲ್ಲಿ ನಡೆದ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಯುವಜನೋತ್ಸವ ಆಯೋಜಿಸುವುದರಿಂದ ಕೋಲಾಟ, ಬಯಲಾಟ, ಸಣ್ಣಾಟ, ದೊಡ್ಡಾಟ, ಸಾಹಿತ್ಯ, ಸಂಗೀತ, ನಾಟಕ, ನೃತ್ಯ, ಶಿಲ್ಪಕಲೆ ಸೇರಿದಂತೆ ಜಾನಪದ ಕಲೆಗಳು ಅನಾವರಣಗೊಳ್ಳಲಿವೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಯುವಜನೋತ್ಸವ ಆಯೋಜಿಸಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕೆಂದರು.

ಯುವಜನರು ಮನಸ್ಸು ಮಾಡಿದರೆ, ಆತ್ಮವಿಶ್ವಾಸದಿಂದ ಮುನ್ನುಗ್ಗಿದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದರೆ ಪ್ರಸ್ತುತ ಮೊಬೈಲ್ ಗೀಳಿಗೆ ದಾಸರಾಗಿ ಸಾಧನೆಗಳು, ಜಾನಪದ ಕಲೆಗಳು, ಕಮರಿ ಹೋಗುತ್ತಿವೆ. ಮಕ್ಕಳು ಮತ್ತು ಯುವಜನತೆ ಪುಸಕ್ತಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಲೆ ತೆಗ್ಗಿಸಿ ಮೊಬೈಲ್ ನೋಡಿದರೆ ವ್ಯಕ್ತಿತ್ವ, ಸಮಯ ವ್ಯರ್ಥ, ಭವಿಷ್ಯದಲ್ಲಿ ಕಾಣುವ ಕನಸುಗಳು, ಸಾಧನೆಗಳು ಕಮರಿ, ಸಮಾಜದಲ್ಲಿ ತಲೆ ತಗ್ಗಿಸಿ ಓಡಾಡುವಂತೆ ಮಾಡುತ್ತದೆ. ಅದೇ ತಲೆ ತಗ್ಗಿಸಿ ಪುಸ್ತಕ ಓದಿದರೆ ಜ್ಞಾನ ವೃದ್ಧಿಯಾಗಿ ಸಾಧನೆಗಳನ್ನು ಮಾಡುವ ಜೊತೆಗೆ ನೀವು ತಲೆ ಎತ್ತಿ ಜಗತ್ತು ನೋಡುವಂತೆ ಮಾಡುತ್ತದೆ. ಹೀಗಾಗಿ ಯುವಜನತೆ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

Read also : ಮದ್ಯ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ನ್ಯಾ. ಮಹಾವೀರ ಮ. ಕರೆಣ್ಣವರಿಂದ ಚಾಲನೆ

ಯುವಜನೋತ್ಸವ ಆಚರಿಸಲು ಸರ್ಕಾರ ಲಕ್ಷಾಂತರ ರೂಪಾಯಿ ಹಣವನ್ನು ನೀಡುತ್ತದೆ. ಆದರೆ ಈ ಹಿಂದೆ ನಡೆದಂತಹ ಯುವಜನೋತ್ಸವಗಳು ಯುವಜನತೆ ಒಳಗೊಳ್ಳುವ ಕಾರ್ಯಕ್ರಮವಾಗದೇ ಆಯೋಜಕರು ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು. ಆ ರೀತಿ ಆಗಬಾರದು. ಸರ್ಕಾರ ಯಾವ ಉದ್ದೇಶಕ್ಕೆ ನೀಡುತ್ತದೆಯೋ ಆ ಹಣ ಕಾರ್ಯಕ್ರಮಕ್ಕೆ ವಿನಿಯೋಗವಾದರೆ ಯುವಜನೋತ್ಸವ ಸಾರ್ಥಕತೆ ಪಡೆದುಕೊಳ್ಳುತ್ತದೆ ಎಂದರು.

ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕುಂಬಾರ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಮಾಗನಹಳ್ಳಿ ಮಂಜುನಾಥ್ ಸೇರಿದಂತೆ ಇನ್ನಿತರರಿದ್ದರು.

ಯುವಜನೋತ್ಸವ ನಿರುತ್ಸಾಹಕರಾಗಿರುವ ಯುವಜನತೆಯನ್ನು ಬಡಿದೆಬ್ಬಿಸಬೇಕೇ ಹೊರತು, ಕಾಟಾಚಾರದ ಕಾರ್ಯಕ್ರಮವಾಗಿ ಸರ್ಕಾರದ ಹಣ ಪೋಲಾಗುವಂತೆ ಆಗಬಾರದು. ಈ ಹಿಂದೆ ಹಣ ಪೋಲು ಮಾಡುವಂತಹ ಕಾರ್ಯಕ್ರಮಗಳು ನಡೆದಿದ್ದು, ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು.
– ಕೆ.ಎಸ್.ಬಸವಂತಪ್ಪ, ಶಾಸಕರು, ಮಾಯಕೊಂಡ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Awareness campaign against alcohol and drugs ಮದ್ಯ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ನ್ಯಾ. ಮಹಾವೀರ ಮ. ಕರೆಣ್ಣವರಿಂದ ಚಾಲನೆ
Next Article Davanagere ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

ದಾವಣಗೆರೆ ಸೆ.14 : ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…

By Dinamaana Kannada News

Harihara | ಆತ್ಮರಕ್ಷಣೆಗೆ ಟೇಕ್ವಾಂಡೋ ಕಲೆ ಸಹಕಾರಿ

ದಾವಣಗೆರೆ (Davanagere) : ಇಲ್ಲಿನ ಗುರುಭವನದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಟೆಕ್ವಾಂಡೋ ಕ್ರೀಡೆಯನ್ನು  ಶಾಲಾ ಶಿಕ್ಷಣ ಇಲಾಖೆ ಉಪ…

By Dinamaana Kannada News

ಆಹಾರ ನಿರೀಕ್ಷಕ ಡಾ.ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು, ದಾಖಲೆ ವಶ

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಆಹಾರ ನಿರೀಕ್ಷಕ ಡಾ.ನಾಗರಾಜ್ ಅವರ ನಿವಾಸ, ಕಚೇರಿ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಿ:ಅಧಿಕಾರಿಗಳಿಗೆ ಡಿಸಿ ಸೂಚನೆ

By Dinamaana Kannada News
Awareness campaign against alcohol and drugs
ತಾಜಾ ಸುದ್ದಿ

ಮದ್ಯ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ನ್ಯಾ. ಮಹಾವೀರ ಮ. ಕರೆಣ್ಣವರಿಂದ ಚಾಲನೆ

By Dinamaana Kannada News
Workshop on AI for students
ತಾಜಾ ಸುದ್ದಿ

ವಿದ್ಯಾರ್ಥಿಗಳಿಗಾಗಿ AI ಕುರಿತು ಕಾರ್ಯಗಾರ

By Dinamaana Kannada News
District Collector G.M. Gangadharaswamy
Blogತಾಜಾ ಸುದ್ದಿ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?