Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಾಡೋಜ ಡಾ.ಕಮಲಾ ಹಂಪನಾ ಅಪರೂಪದ ಸ್ತ್ರೀ ಸಾಹಿತ್ಯ ರತ್ನ : ಬಿ ವಾಮದೇವಪ್ಪ
ತಾಜಾ ಸುದ್ದಿ

ನಾಡೋಜ ಡಾ.ಕಮಲಾ ಹಂಪನಾ ಅಪರೂಪದ ಸ್ತ್ರೀ ಸಾಹಿತ್ಯ ರತ್ನ : ಬಿ ವಾಮದೇವಪ್ಪ

Dinamaana Kannada News
Last updated: June 24, 2024 5:15 pm
Dinamaana Kannada News
Share
Davangere
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದಾವಣಗೆರೆ
SHARE

ದಾವಣಗೆರೆ :  ಸಾಹಿತ್ಯ ಕ್ಷೇತ್ರಕ್ಕೆ ಅನುಪಮವಾದ ಸೇವೆ ಸಲ್ಲಿಸುವ ಮೂಲಕ ನಾಡೋಜ ಡಾ.ಕಮಲಾ ಹಂಪನಾರವರು ಅಪರೂಪದ ಸಾಹಿತ್ಯ ಸ್ತ್ರೀ ರತ್ನ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಬಣ್ಣಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಕಮಲಾ ಹಂಪನಾ ಅವರಿಗೆ ನುಡಿ ನಮನವನ್ನು ಸಲ್ಲಿಸಿ ಅವರು  ಮಾತಾಡಿದರು.

ಸುಮಾರು 50 ಕ್ಕೂ ಹೆಚ್ಚು ಮೌಲ್ವಿತ ಕೃತಿಗಳನ್ನು ರಚಿಸಿ ತಮ್ಮ ಸಾಧನೆಯನ್ನು ಮೆರೆದಿದ್ದಾರೆ. ಸಾಹಿತ್ಯಕ ಸೇವೆ, ಸಾಧನೆ, ಅನುಭವ ಹಾಗೂ ವಯಸ್ಸಿನಲ್ಲಿ ಶ್ರೇಷ್ಠತೆಯ ಪರಾಕಾಷ್ಠೆಯನ್ನು ತಲುಪಿದ್ದರು. ದಾವಣಗೆರೆಯೊಂದಿಗೆ ಅವರು ಅವಿನಾಭವ ಸಂಬಂಧವನ್ನೂ ಹೊಂದಿದ್ದರು. ಅಂತವರು ಅಗಲಿರುವುದು ಕನ್ನಡ ನಾಡಿಗೆ, ಸಾರಸ್ವತ ಲೋಕಕ್ಕೆ ಭರಿಸಲಾರದ ನಷ್ಟವನ್ನುಂಟು ಮಾಡಿದೆ ಎಂದು ಹೇಳಿದರು.

ವಿಶ್ರಾಂತ ಉಪನ್ಯಾಸಕ ಸುಭಾಷ್ ಚಂದ್ರ ಬೋಸ್ ಮಾತನಾಡಿ, ಕಮಲಾ ಹಂಪನಾ ಎಂಬ ಶಿರೂನಾಮೆಯೇ ವಿಶೇಷವಾಗಿದೆ. ಕಮಲಾ ಹಿಂದೂ ಧರ್ಮಕ್ಕೆ ಸೇರಿದವರು ಹಾಗೂ  ಹಂಪ ನಾಗರಾಜಯ್ಯ ಅವರು ಜೈನ ಧರ್ಮಕ್ಕೆ ಸೇರಿದವರು. ಅವರಿಬ್ಬರ ಸಮ್ಮಿಲನವು ಎರಡು ಸಾಹಿತ್ಯ ಪ್ರತಿಭೆಗಳ ಸಮ್ಮಿಲನವಾಯಿತು. ಜಾತಿ ಧರ್ಮ ಮೀರಿ ಈರ್ವರೂ ಸಾಹಿತ್ಯಕ ಕೃಷಿ ಮಾಡಿ ಸಾಹಿತ್ಯ ವಲಯದಲ್ಲಿ ಅಪರೂಪದ ಸಾಧನೆ ಮಾಡಿ ಸೈ ಎನಿಸಿಕೊಂಡರು. ಶತಮಾನದ ಅಂಚಿನವರೆಗೆ ತುಂಬು ಬದುಕನ್ನು ಸಾಗಿಸಿ ಇಹಲೋಕ ತ್ಯಜಿಸಿದ್ದಾರೆ ಎಂದು ಬಣ್ಣಿಸಿದರು.

ದಾವಣಗೆರೆ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರವಿಚಂದ್ರರವರು ನಾಡೋಜ ಡಾ.ಕಮಲಾ ಹಂಪನಾ ಅವರ ಒಡನಾಟವನ್ನು ಸ್ಮರಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ, ನಾಡೋಜ ಕಮಲಾ ಹಂಪನಾ ಅವರ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು 2003 ರಲ್ಲಿ ಮುಡುಬಿದಿರೆಯಲ್ಲಿ ನಡೆದ 71 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಗೌರವವನ್ನು ನೀಡಿತ್ತು. ಕಮಲಾ ಹಂಪನಾರವರು ಕನ್ನಡ ನಾಡಿನ ಅಗ್ರಗಣ್ಯ ಲೇಖಕರಾಗಿ,  ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ವಿಮರ್ಶಕರಾಗಿ ಹಾಗೂ ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಬಹು ಆಯಾಮಗಳಲ್ಲಿ ಸಾಹಿತ್ಯಕ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಮಾಡಿದ್ದರು ಎಂದು ಸ್ಮರಿಸಿದರು.

ದಾವಣಗೆರೆ ತಾಲ್ಲೂಕು ಸುಮತಿ ಜಯಪ್ಪ, ಸತ್ಯಭಾಮ ಮಂಜುನಾಥ್, ಎಸ್.ಎಂ.ಮಲ್ಲಮ್ಮ, ಲೇಖಕ ನಾಗರಾಜ್ ಸಿರಿಗೆರೆ ಕಮಲಾ ಹಂಪನಾ ಅವರನ್ನು ಸ್ಮರಿಸಿ ನುಡಿನಮನವನ್ನು ಸಲ್ಲಿಸಿದರು.

ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಂಜಣ್ಣ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಬಿ ದಿಳ್ಯಪ್ಪ, ರೇವಣಸಿದ್ಧಪ್ಪ ಅಂಗಡಿ, ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ,  ಸಂಘಟನಾ ಕಾರ್ಯದರ್ಶಿಗಳಾದ ಸಿ ಜಿ ಜಗದೀಶ್ ಕೂಲಂಬಿ, ಪತ್ರಕರ್ತ ಜಿಗಳಿ ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್ ಎಂ ಮಲ್ಲಮ್ಮ, ಬೈರೇಶ್ವರ, ಸತ್ಯಭಾಮಾ ಮಂಜುನಾಥ್,  ರುದ್ರಾಕ್ಷಿ ಭಾಯಿ, ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ದಾಗಿನಕಟ್ಟೆ ಪರಮೇಶ್ವರಪ್ಪ, ನಾಗರಾಜ್ ಸಿರಿಗೆರೆ, ಬೇತೂರು ಎಂ ಷಡಾಕ್ಷರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ ಶಿವಶಂಕರ್, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಉಪಾಧ್ಯಕ್ಷ ಆರ್.ಆಂಜನೇಯ, ಖಜಾಂಚಿ ಕೆ.ವಿಶ್ವನಾಥ್ ಬಿಲ್ಲವ, ಕನ್ನಡಪರ ಸಂಘಟಕ ರಾಜೇಂದ್ರ ಬಂಗೇರ, ಶಿಕ್ಷಕಿ ಕೆ.ವೀಣಾ, ಸಾಹಿತಿ ಪಿ.ಜಯರಾಮನ್, ಹಾಲೇಶ್, ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ್ ಅಂಗಡಿ, ಕರಿಬಸಪ್ಪ, ಬಸವರಾಜ್ ಹೆಚ್, ಹೆಚ್‌.ಎಲ್‌.ಶ್ರೀನಿವಾಸ ಮತ್ತಿತರರು  ಉಪಸ್ಥಿತರಿದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ವೆಂಕಟೇಶ್ ಬಾಬು ಪಿಎಚ್ಡಿ ಪದವಿ
Next Article All India Youth Congress ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಬೀಜ – ಗೊಬ್ಬರ ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ : ಡಿಸಿ

ದಾವಣಗೆರೆ (Davanagere): ಮುಂಗಾರು ಮಳೆ ಉತ್ತಮ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಆದ್ದರಿಂದ ವರ್ತಕರು ರೈತರಿಗೆ ಬೇಕಾದ ಬಿತ್ತನೆ…

By Dinamaana Kannada News

Davanagere Dinamaana : ದೈವಗಳೇ ದೈವೋದ್ಯಮಿಗಳ ಕಪಿಮುಷ್ಟಿಯಿಂದ ಹೊರಬನ್ನಿ

Kannada News | Dinamaana.com | 16-08-2024 ಸಂಸ್ಕೃತಿ, ನಂಬಿಕೆ, ಆರಾಧನಾ ಪದ್ಧತಿ ಉಳಿಸಬೇಕು ಎಂಬುದು ಸರಿ. ಆದರೆ, ಅದರ…

By Dinamaana Kannada News

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?